ಬೆಳ್ತಂಗಡಿ:ಕುದ್ರಾಯ ಸೇತುವೆ ಸಮೀಪ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ!!ಸ್ಥಳೀಯರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಬೆಳ್ತಂಗಡಿ ತಾಲೂಕಿನ ನಿಡ್ಲೆ ಸಮೀಪದ ಕುದ್ರಾಯ ಸೇತುವೆ ಸಮೀಪ ಇಂದು ಸಂಜೆ ಕಾರೊಂದರಲ್ಲಿ ಇದ್ದಕ್ಕಿದಂತೆ ಬೆಂಕಿ ಹೊತ್ತಿಕೊಂಡು ದಟ್ಟವಾದ ಹೊಗೆ ಕಾಣಿಸಿಕೊಂಡಿದೆ.

ಅಪಾಯ ಅರಿತ ಕೂಡಲೇ ಸ್ಥಳೀಯ ಪ್ರತ್ಯಕ್ಷದರ್ಶಿಗಳು ಬೆಂಕಿಯನ್ನು ನಂದಿಸಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Leave A Reply

Your email address will not be published.