ಉಳ್ಳಾಲ : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ, ವ್ಯಕ್ತಿ ಸ್ಥಳದಲ್ಲೇ ಸಾವು

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಾರಿಯಾದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾ.ಹೆ.66 ರ ಉಳ್ಳಾಲ ಸಮೀಪದ ಬೀರಿ ಎಂಬಲ್ಲಿ ನಡೆದಿದೆ.

ಧಾರವಾಡ ಮೂಲದ ವಲಸೆ ಕಾರ್ಮಿಕ ಆನಂದ್ ಅಲಿಯಾಸ್ ಸಾಗರ್ (28) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.

ಮೃತ ವ್ಯಕ್ತಿ ಸಂಕೋಳಿಗೆಯ ಎ.ಕೆ ಟ್ರೇಡರ್ಸ್ ಎಂಬ ಸಿಮೆಂಟ್ ಅಂಗಡಿಯಲ್ಲಿ ಕೂಲಿ ಕಾರ್ಮಿಕನಾಗಿ ದುಡಿಯುತ್ತಿದ್ದರು. ಅವರು ಶನಿವಾರ ರಾತ್ರಿ ಸ್ನೇಹಿತನ ಜೊತೆ ಬೀರಿಯ ಹೆದ್ದಾರಿ ಬದಿಯಲ್ಲಿರುವ ರೆಸ್ಟೋರಂಟಿಗೆ ತೆರಳಿದ್ದರು. ಅಲ್ಲಿಂದ ಹಿಂತಿರುಗುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ. ಡಿಕ್ಕಿಯ ರಭಸಕ್ಕೆ ಆನಂದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Leave A Reply

Your email address will not be published.