ಇಂದು ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ|ಚಳಿಗಾಲದ ಅಧಿವೇಶನ ನಡೆಸುವ ಕುರಿತು ವಿಧಾನ ಪರಿಷತ್ ಸಭಾಪತಿ ಸುವರ್ಣಸೌಧ ಭೇಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಲಿದ್ದು,ಚಳಿಗಾಲದ ಅಧಿವೇಶನ ನಡೆಸುವ ಕುರಿತಂತೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸುವರ್ಣಸೌಧಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸುವ ಬಗ್ಗೆ ಸಭೆಯಲ್ಲಿ ದಿನಾಂಕ ನಿಗದಿಯಾಗುವ ಸಾಧ್ಯತೆ ಇದೆ. ಈ ನಡುವೆ ಬೆಳಗಾವಿ ಅಧಿವೇಶನವನ್ನು ಇದೇ ಪ್ರಥಮ ಬಾರಿಗೆ ವೆಬ್ ಕಾಸ್ಟಿಂಗ್ ಮೂಲಕ ನೇರ ಪ್ರಸಾರ ಮಾಡಲು ಉದ್ದೇಶಿಸಲಾಗಿದೆ ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಅಧಿವೇಶನದ ಪೂರ್ವಭಾವಿ ಸಿದ್ಧತೆ ಪರಿಶೀಲನೆಗಾಗಿ ಇಂದು ಅವರು ಸುವರ್ಣಸೌಧಕ್ಕೆ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.

Leave A Reply

Your email address will not be published.