ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆ

ಮಂಗಳೂರು : ಚಿಕಿತ್ಸೆಗೆ ಹೊಗುತ್ತೇನೆಂದು ಹೇಳಿ ನಿನ್ನೆ ಹೋಗಿದ್ದ ವ್ಯಕ್ತಿ ಕಾರಿನೊಳಗೆ ಶವವಾಗಿ ಪತ್ತೆಯಾದ ಘಟನೆ ಶುಕ್ರವಾರ ಕಂಕನಾಡಿಯಲ್ಲಿ ನಡೆದಿದೆ.

ಮೃತ ವ್ಯಕ್ತಿ ಮಣ್ಣಗುಡ್ಡೆಯ ಪ್ರಶಾಂತ್(44) ಎಂದು ಗುರುತಿಸಲಾಗಿದೆ.
ಗುರುವಾರ ಚಿಕಿತ್ಸೆಗೆ ಹೋಗುವುದಾಗಿ ಹೇಳಿ ಪ್ರಶಾಂತ್ ಅವರದ್ದೇ ಕಾರಿನಲ್ಲಿ ಮನೆಯಿಂದ ಹೊರಟಿದ್ದರು. ಆದರೆ, ಮನೆಗೆ ಬಾರದೇ ಇದ್ದಾಗ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಮೊಬೈಲ್ ಲೊಕೇಷನ್ ಆಧರಿಸಿ ಪತ್ತೆ ಗೆ ಮುಂದಾಗಿದ್ದು, ಆಗ ಕಂಕನಾಡಿಯ ಹೊಟೇಲೊಂದರ ಬಳಿ ಕಾರಿನೊಳಗೆ ಶವವಾಗಿ ಪತ್ತೆಯಾಗಿದ್ದಾರೆ.

Leave A Reply

Your email address will not be published.