ಪುತ್ತೂರು : ರಸ್ತೆ ಬದಿ ನಿಂತಿದ್ದ ಲಾರಿಗೆ ಇನ್ನೊಂದು ಲಾರಿ ಡಿಕ್ಕಿ ,ನಿರ್ವಾಹಕನಿಗೆ ಗಂಭೀರ ಗಾಯ

ಪುತ್ತೂರು: ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಬಂದು ಡಿಕ್ಕಿ ಹೊಡೆದು, ಲಾರಿಯಲ್ಲಿದ್ದ ನಿರ್ವಾಹಕನ ಕಾಲು ಮುರಿತಗೊಂಡ ಘಟನೆ ನ.13 ರಂದು ಪುತ್ತೂರಿನ ಕೆಮ್ಮಾಯಿ ಜಂಕ್ಷನ್ ನಲ್ಲಿ ನಡೆದಿದೆ.

ರಸ್ತೆ ಕಾಮಗಾರಿ ವೇಳೆ ರಸ್ತೆ ಬದಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಬಂದು ಡಿಕ್ಕಿ ಹೊಡೆದಿದ್ದು ಡಿಕ್ಕಿಯ ರಭಸಕ್ಕೆ ಲಾರಿಯಲ್ಲಿದ್ದ ನಿರ್ವಾಹಕನ ಕಾಲು ಮುರಿತಗೊಂಡಿದ್ದು, ಎಸ್.ಎಸ್.ಎಫ್. ಆಂಬ್ಯುಲೆನ್ಸ್ ಮೂಲಕ ಪುತ್ತೂರಿನ ಆಸ್ಪತ್ರೆಗೆ ಕರೆ ತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

Leave A Reply

Your email address will not be published.