ಬಂಟ್ವಾಳ : ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿದ ಮಹಿಳೆ

Share the Article

ಪಾಣೆಮಂಗಳೂರು ನೇತ್ರಾವತಿ ಸೇತುವೆಯಿಂದ ಮಹಿಳೆಯೋರ್ವಳು ನದಿಗೆ ಹಾರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಳಿಗ್ಗೆ 10 ಗಂಟೆಯ ಸುಮಾರಿಗೆ ವೇಳೆ ಗೆ ನೇತ್ರಾವತಿ ಸೇತುವೆಯಿಂದ ಮಹಿಳೆಯೊರ್ವಳು ಹಾರಿದ್ದನ್ನು ವಾಹನ ಸವಾರರು ನೋಡಿ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕೂಡಲೇ ಸ್ಥಳೀಯ ಮುಳುಗುಗಾರರು ದೋಣಿಯ ಮೂಲಕ ನೇತ್ರಾವತಿ ಸೇತುವೆಯ ಬಳಿಗೆ ಬಂದರೂ ಅದಾಗಲೇ ಮಹಿಳೆ ನೀರಿನಲ್ಲಿ ಮುಳುಗಿ ಕೊಚ್ಚಿಕೊಂಡು ಹೋಗಿದ್ದಾರೆ ಎಂಬ ಮಾಹಿತಿ ಸ್ಥಳೀಯರು ನೀಡಿದ್ದಾರೆ.

ನದಿಗೆ ಹಾರಿದ ಮಹಿಳೆ ಯಾರು ಎಂಬ ಮಾಹಿತಿ ಇನ್ನೂ ಕೂಡ ಲಭ್ಯವಾಗಿಲ್ಲ. ಘಟನೆ ನಡೆದ ಬಳಿಕ ಕೆಲ ಹೊತ್ತು ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆಯಾಗಿತ್ತು.

ವೇದಿಕೆಗೆ ಬಂದ ಮೇಲೆ ಏನಾದರೂ ಮಾತನಾಡಬೇಕಲ್ಲಾ -ಸೋಮಶೇಖರ್ ಹೇಳಿಕೆಗೆ ರಾಜೇಂದ್ರ ಕುಮಾರ್ ಪ್ರತಿಕ್ರಿಯೆ

Leave A Reply

Your email address will not be published.