ವೇದಿಕೆಗೆ ಬಂದ ಮೇಲೆ ಏನಾದರೂ ಮಾತನಾಡಬೇಕಲ್ಲಾ -ಸೋಮಶೇಖರ್ ಹೇಳಿಕೆಗೆ ರಾಜೇಂದ್ರ ಕುಮಾರ್ ಪ್ರತಿಕ್ರಿಯೆ

ಮಂಗಳೂರು : ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಬರಬಾರದೆಂದು ಕಳೆದ 35ವರ್ಷಗಳಿಂದಲೂ ನಾನು ಪ್ರತಿಪಾದಿಸುತ್ತಾ ಬಂದಿದ್ದೇನೆ.ಈ ಬಾರಿ ನಾನು ಪಕ್ಷೇತರನಾಗಿ ವಿಧಾನ ಪರಿಷತ್ ಗೆ ಸ್ಪರ್ಧಿಸ ಬಯಸಿದ್ದೆ.ಆದರೆ ಬದಲಾದ ಪರಿಸ್ಥಿತಿಯಲ್ಲಿ ನಾನು ಸ್ಪರ್ಧೆಯಿಂದ ಹಿಂದಕ್ಕೆ ಸರಿದಿದ್ದೇನೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದ್ದಾರೆ.

ಮಾಧ್ಯಮದ ಜತೆ ಮಾತನಾಡಿದ ಅವರು ಅನೇಕರು ನನಗೆ ಬೆಂಬಲವಾಗಿ ನಿಂತಿದ್ದಾರೆ.ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.

ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ನಾನು ಅವರು ಸ್ನೇಹಿತರು.ವೇದಿಕೆ ಮೇಲೆ ಬಂದಾಗ ಏನಾದರೂ ಮಾತನಾಡಬೇಕಲ್ಲಾ,ರಾಜಕೀಯ ಅಂದರೆ ಹೀಗೆ ಎಂದರು.

Leave A Reply

Your email address will not be published.