Breaking news
ನಾರಾವಿ: ತೋಟದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಕೃಷಿಕ!! ಸ್ಥಳಕ್ಕೆ ಪೊಲೀಸರ ಭೇಟಿ

ಬೆಳ್ತಂಗಡಿ: ಕೃಷಿಕರೊಬ್ಬರು ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ನಾರಾವಿ ಸಮೀಪ ನಡೆದಿದೆ.

ನಾರಾವಿ ಅಂಗರಕೋಡಿ ಲಕ್ಷ್ಮಣಶೆಟ್ಟಿ ಎಂಬವರ ಪುತ್ರ ಸಂತೋಷ್(38) ಆತ್ಮಹತ್ಯೆಗೆ ಶರಣಾದ ಯುವಕ.ಕೃಷಿಕಾರಾಗಿದ್ದ ಇವರು ಇಂದು ಮುಂಜಾವಿನ ಹೊತ್ತಲ್ಲಿ ತಮ್ಮದೇ ತೋಟದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ನಡೆಸಿಕೊಂಡಿದ್ದಾರೆ.

ಆತ್ಮಹತ್ಯೆಗೆ ನಿಖರಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave A Reply

Your email address will not be published.