ಮಂಗಳೂರಿನಲ್ಲಿ ಸುಲಿಗೆಗಿಳಿದ ಮಂಗಳಮುಖಿ!! ಒಂಟಿ ಬೈಕ್ ಸವಾರರೇ ಇವರ ಟಾರ್ಗೆಟ್

ಮಂಗಳೂರು:ಇತ್ತೀಚೆಗೆ ಮಂಗಳಮುಖಿಯರ ಸುಲಿಗೆ ಅಧಿಕವಾಗಿದೆ.ಬಸ್ ಪ್ರಯಾಣಿಕರನ್ನು ಬಿಡದೆ ಎಲ್ಲಾ ಜನರಿಂದ ಹಣ ವಸೂಲಿ ಮಾಡುತ್ತಿರುವುದು ಕಂಡು ಬಂದಿದೆ. ಇದೀಗ ಒಂಟಿಯಾಗಿ ಹೋಗುವ ಬೈಕ್ ಸವಾರರನ್ನು ಟಾರ್ಗೆಟ್ ಮಾಡಿ ಸುಲಿಗೆ ಮಾಡುತ್ತಿದ್ದ ಮಂಗಳಮುಖಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ನಗರದ ಇಜಿಪುರದ ಅಭಿಷೇಕ್ @ ಗೊಂಬೆ @ಅನಾಮಿಕ (27) ಬಂಧಿತ ಮಂಗಳಮುಖಿ ಎಂದು ತಿಳಿದು ಬಂದಿದೆ.

ಘಟನೆಯ ವಿವರ :

ಮಂಗಳೂರು ನಗರದ ನಂತೂರು ಪದವು ಬಳಿಯಿರುವ ಬಿ ಎಸ್ ಎನ್ ಎಲ್ ಎಕ್ಸ್‌ಚೇಂಜ್ ಬಳಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಗಣೇಶ್ ಶೆಟ್ಟಿ ರವರು ಬೈಕ್ ನಲ್ಲಿ ಬರುವಾಗ ಈ ಮಂಗಳಮುಖಿ ರಸ್ತೆಗೆ ಅಡ್ಡ ಬಂದು ಗಣೇಶ್ ಶೆಟ್ಟಿರವರನ್ನು ತಡೆದು ನಿಲ್ಲಿಸಿ, ಅವರ
ಮುಖಕ್ಕೆ ಪೆಪ್ಪರ್ ಸ್ಪೇ ಮಾಡಿ ಅವರ ಕುತ್ತಿಯಲ್ಲಿದ್ದ ಸುಮಾರು 24 ಗ್ರಾಂ ತೂಕದ ಚಿನ್ನದ ಸರವನ್ನು ಸುಲಿಗೆ ಮಾಡಿಕೊಂಡು ಹೋಗಿದ್ದನು.

ಈ ಘಟನೆಯ ದೂರಿನ ಪ್ರಕಾರ,ಆರೋಪಿಯನ್ನು ಕದ್ರಿ ಠಾಣೆಯ ಪೊಲೀಸರು ಬಂಧಿಸಿದಾಗ ಈತ ಮೂರು ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ತಿಳಿದುಬಂದಿದೆ.ಆರೋಪಿ ಯಿಂದ ಒಟ್ಟು 71 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ.

Leave A Reply

Your email address will not be published.