ಪಿಯುಸಿ ಸಹಿತ ಡಿಪ್ಲೋಮ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲದೆ ಸುವರ್ಣಾವಕಾಶ!! ಭೂ ಮಾಪನ-ಕಂದಾಯ ಇಲಾಖೆಯ ಸರ್ವೆಯರ್ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ

ರಾಜ್ಯ ಭೂ ಮಾಪನ ಮತ್ತು ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಸರ್ವೆಯರ್ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಪಿಯುಸಿ ಅಥವಾ ಡಿಪ್ಲೋಮ ಪದವಿಯನ್ನು ಪಡೆದವರಾಗಿದ್ದು, ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಒಬ್ಬ ಅಭ್ಯರ್ಥಿಗೆ ಒಂದು ಅರ್ಜಿಯನ್ನು ಮಾತ್ರ ಸಲ್ಲಿಸಲು ಅವಕಾಶವಿದ್ದು, ಆನ್ ಲೈನ್ ಅರ್ಜಿ ಸಲ್ಲಿಕೆಗೆ ಡಿಸೆಂಬರ್ 31 ಕೊನೆಯ ದಿನವಾಗಿದೆ.

http://rdservices.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು.ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ಬಿಳಿಯ ಹಾಳೆಯ ಮೇಲೆ ಅಂಟಿಸಿ, ಚಿತ್ರದ ಕೆಳಗೆ ಪೂರ್ಣ ಸಹಿ ಮಾಡಿಕೊಳ್ಳಬೇಕು. ಅರ್ಜಿಯನ್ನು ತೆರೆಯುವ ಮೊದಲು ಸ್ಕ್ಯಾನಿಂಗ್ ಪೂರ್ಣಗೊಂಡಿರಬೇಕು.

ಹೆಚ್ಚಿನ ಮಾಹಿತಿಗೆ https://landrecords.karnataka.gov.in/ ಲಿಂಕ್ ಬಳಸಬಹುದಾಗಿದೆ.

Leave A Reply

Your email address will not be published.