ಉಪ್ಪಿನಂಗಡಿ:ಯುವಕರ ಮೇಲೆ ತಲವಾರು ದಾಳಿ ಐದು ಮಂದಿ ಆಸ್ಪತ್ರೆಗೆ ದಾಖಲು

ಉಪ್ಪಿನಂಗಡಿ: ಯುವಕರ ಮೇಲೆ ಗುಂಪೊಂದು ತಲವಾರು ದಾಳಿ ನಡೆಸಿದ ಘಟನೆ ಡಿ.5ರ ಸಂಜೆ ಇಳಂತಿಲ ಗ್ರಾಮದ ಅಂಡೆತಡ್ಕದಲ್ಲಿ ನಡೆದಿದೆ.

ಇಲ್ಲಿನ ಅಂಗಡಿಯೊಂದರ ಬದಿಯಲ್ಲಿ ಸುಮಾರು 7 ಗಂಟೆಗೆ ಸ್ಥಳೀಯ ನಿವಾಸಿಗಳಾದ ಫಯಾಝ್ (26ವ.) ಹಾಗು ಆಫೀಝ್ (19ವ.) ಎಂಬವರು ಕುಳಿತುಕೊಂಡಿದ್ದ ವೇಳೆ ಅಲ್ಲಿಗೆ ಬಂದ 4-5 ಮಂದಿಯಿದ್ದ ತಂಡ ಏಕಾಏಕಿ ತಲವಾರು ದಾಳಿ ನಡೆಸಿದ್ದಾರೆ. ಗಾಯಗೊಂಡ ಫಯಾಝ್ ಹಾಗೂ ಆಫೀಜ್ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಬಳಿಕದ ಬೆಳವಣಿಗೆಯಲ್ಲಿ

ರಾತ್ರಿ ಸುಮಾರು 8.30ರ ವೇಳೆಗೆ 30-40 ಮಂದಿ ಬೈಕ್‌ಗಳಲ್ಲಿ ಬಂದಿದ್ದು ಅಂಗಡಿಯಲ್ಲಿ ಕುಳಿದುಕೊಂಡಿದ್ದ ಸಿದ್ದೀಕ್, ಅಯೂಬ್, ಝಕರಿಯಾ ಎಂಬವರ ಮೇಲೆ ತಲವಾರು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ಗಾಯಾಳುಗಳು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿ ತಿಳಿದು ಬಂದಿದೆ. ಘಟನೆಗೆ ಕಾರಣ ತಿಳಿದುಬ೦ದಿಲ್ಲ.ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ.

Leave A Reply

Your email address will not be published.