ಡಿ.9 : ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವ,ಆಶ್ಲೇಷ ಬಲಿ ಸೇವೆ

ಪುತ್ತೂರು : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ದೇವಸ್ಥಾನವಾಗಿರುವ ಕೊಳ್ತಿಗೆ ಗ್ರಾಮದ ನಳೀಲು ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.9ರಂದು ಚಂಪಾ ಷಷ್ಠಿ ಮಹೋತ್ಸವ ನಡೆಯಲಿದೆ.

ಕಾರ್ಯಕ್ರಮದಲ್ಲಿ ಡಿ. 8ರಂದು ರಾತ್ರಿ ವಿಶೇಷ ಕಾರ್ತಿಕ ಪೂಜೆ ನಡೆಯಿತು. ಡಿ.9ರಂದು ಚಂಪಾ ಷಷ್ಠಿಯ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಮಹಾಪೂಜೆ,ಆಶ್ಲೇಷ ಬಲಿ ಸೇವೆ,ನಾಗತಂಬಿಲ ನಡೆಯಲಿದೆ.

ಆದಿ ಸುಬ್ರಹ್ಮಣ್ಯದಂತೆ ಹುತ್ತಕ್ಕೆ ಪೂಜೆ ಸಲ್ಲಿಸುವ ಇನ್ನೊಂದು ದೇವಸ್ಥಾನದ ಬಗ್ಗೆ ನಿಮಗೆ ಗೊತ್ತೇ ?

ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು ತಿಳಿಸಿದ್ದಾರೆ.

Leave A Reply

Your email address will not be published.