ಎಲ್ಲಾ ಸ್ಥಳೀಯ ಸಂಸ್ಥೆಯ ಸದಸ್ಯರಿಗೆ ಕೋಟ ಅವರಿಗೆ ಮತ ನೀಡುವಂತೆ ಸಂದೇಶ | ದ.ಕ.ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಟದಿಂದ ವಿನೂತನ ಪ್ರಯತ್ನ

ಮಂಗಳೂರು: ಡಿ.10ರಂದು ನಡೆಯಲಿರುವ ವಿಧಾನಪರಿಷತ್‌ ಚುನಾವಣೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಗ್ರಾ.ಪಂ ಹಾಗೂ ಸ್ಥಳೀಯ ಸಂಸ್ಥೆಯ ಸದಸ್ಯರಿಗೆ ದ.ಕ.ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಟದ ವತಿಯಿಂದ ಸುಮಾರು 6 ಸಾವಿರಕ್ಕೂ ಅಧಿಕ ಮಂದಿಗೆ Text message ಕಳುಹಿಸುವ ಮೂಲಕ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮತ ನೀಡುವಂತೆ ವಿನಂತಿಸಿದ್ದಾರೆ.

ಈ ಸಂದೇಶ ಬಿಜೆಪಿ ಬೆಂಬಲಿತ ಸದಸ್ಯರಿಗೆ ಮಾತ್ರವಲ್ಲದೇ ಎಲ್ಲಾ ಪಕ್ಷದ ಸದಸ್ಯರಿಗೂ ಈ ಸಂದೇಶ ತಲುಪಿಸುವ ಕೆಲಸ ಮಾಡಲಾಗಿದೆ.ಈಗಾಗಲೇ ದ.ಕ.ಜಿಲ್ಲೆಯ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಟವು ಹಲವು ಪರಿಣಾಮಕಾರಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು,ರಾಜ್ಯ ,ಕೇಂದ್ರ ಸರಕಾರದ ಯೋಜನೆಗಳ ಜತೆಗೆ ಇತರ ಸೇವೆಗಳ ಮಾಹಿತಿಯನ್ನು ಜನರಿಗೆ ತಲುಪಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದೆ.

Leave A Reply

Your email address will not be published.