ಶಿಕ್ಷಕರ ತಲೆಗೆ ಬಕೆಟ್ ಹಾಕಿ ಹಲ್ಲೆಗೈದ ವಿದ್ಯಾರ್ಥಿಗಳು | ವಿದ್ಯಾರ್ಥಿಗಳ ಪುಂಡಾಟಿಕೆ ವಿರುದ್ಧ ವ್ಯಾಪಕ ಆಕ್ರೋಶ

ದಾವಣಗೆರೆ : ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಸರ್ಕಾರಿ ಹೈಸ್ಕೂಲ್‌ನಲ್ಲಿ ತರಗತಿಗೆ ಪಾಠ ಮಾಡಲು ಬಂದ ಗುರುವಿನ ತಲೆಯ ಮೇಲೆ ಬಕೆಟ್ ಹಾಕಿ, ಹಲ್ಲೆಯನ್ನೂ ನಡೆಸಿ ವಿದ್ಯಾರ್ಥಿಗಳು ಪುಂಡಾಟಿಕೆ ನಡೆಸಿದ್ದಾರೆನ್ನಲಾದ ವೀಡಿಯೊ ಒಂದು ವೈರಲ್ ಆಗಿದೆ.ಈ ಕುರಿತು ವ್ಯಾಪಾಕ ಆಕ್ರೋಶ ವ್ಯಕ್ತವಾಗಿದೆ.

ಶಿಕ್ಷಕ ಪ್ರಕಾಶ್ ಅವರು ಹಿಂದಿ ಪಾಠ ಮಾಡಲು ತರಗತಿಗೆ ಬಂದು ಕುಳಿತಿದ್ದ ಪುಂಡ ವಿದ್ಯಾರ್ಥಿಗಳು ಕೀಟಲೆ ಮಾಡಿ ತಲೆಯ ಮೇಲೆ ಬಕೆಟ್ ತೊಡಿಸಿ ಸತಾಯಿಸಿ, ಹಲ್ಲೆ ನಡೆಸಿರುವ ಅಮಾನವೀಯ ಘಟನೆ ನಡೆದಿದೆ.

ನಾಲೈದು ವಿದ್ಯಾರ್ಥಿಗಳು ಶಿಕ್ಷಕರೊಂದಿಗೆ ಅಮಾನವೀಯವಾಗಿ ನಡೆದುಕೊಂಡಿದ್ದು, ದೃಶ್ಯವನ್ನು ತರಗತಿಯಲ್ಲಿದ್ದ ಸಹ ವಿದ್ಯಾರ್ಥಿಗಳು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಈ ಘಟನೆ ಬೆಳಕಿಗೆ ಬಂದ ತಕ್ಷಣ, ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿಗಳ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ. ಕೂಡಲೇ ಪುಂಡ ವಿದ್ಯಾರ್ಥಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ದೃಶ್ಯವನ್ನು ತರಗತಿಯಲ್ಲಿದ್ದ ಸಹ ವಿದ್ಯಾರ್ಥಿಗಳು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಈ ಘಟನೆ ಬೆಳಕಿಗೆ ಬಂದ ತಕ್ಷಣ, ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿಗಳ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ.

Leave A Reply

Your email address will not be published.