ಮಂಗಳೂರು : ತಡೆಗೋಡೆ ಕುಸಿದು ಕೂಲಿ ಕಾರ್ಮಿಕ ಮಹಿಳೆ ಮೃತ್ಯು | ಗುತ್ತಿಗೆದಾರನ ವಿರುದ್ಧ ಪ್ರಕರಣ ದಾಖಲು
ಮಂಗಳೂರು:ಕಾಮಗಾರಿ ನಡೆಯತ್ತಿದ್ದ ವೇಳೆ ತಡೆಗೋಡೆ ಕುಸಿದು ಬಿದ್ದು ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬೋಂದೆಲ್ ಬಳಿಯ ಕೃಷ್ಣನಗರದಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಆಂಧ್ರಪ್ರದೇಶ ಮೂಲದ ತಿಮ್ಮಕ್ಕ (42) ಎಂದು ತಿಳಿದು ಬಂದಿದೆ.
ಮಂಗಳೂರು ಮಹಾನಗರ ಪಾಲಿಕೆಯ ಜಲಸಿರಿ ಯೋಜನೆಯಡಿ ಪೈಪ್ ಲೈನ್ ಹಾಕಲು ಗುಂಡಿ ಅಗೆಯುವ ಕಾಮಗಾರಿ ನಡೆಸುತ್ತಿದ್ದಾಗ ತಡೆಗೋಡೆ ಕೆಳಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಬಿದ್ದಿದೆ. ಮಹಿಳೆ ಮಣ್ಣಿನಡಿಯಲ್ಲಿ ಸಿಲುಕಿದ್ದು, ಬಳಿಕ ಅವರನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮಹಾನಗರ ಪಾಲಿಕೆಯ ಕಾಮಗಾರಿ ನಿರ್ವಹಿಸುತ್ತಿದ್ದ ಗುತ್ತಿಗೆದಾರನ ಮೇಲೆ ಕಾವೂರು ಪೊಲೀಸರು ಕೇಸು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.