ಬೆಳ್ತಂಗಡಿ : ವಸಂತ ಬಂಗೇರ ರಾಜಕೀಯ ನಿವೃತ್ತಿ ? ಏನಾಂತರೆ ಈ ಕುರಿತು ಬಂಗೇರರು..

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ಕೆ ವಸಂತ ಬಂಗೇರ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಮುಂಬರುವ ಚುನಾವಣೆಗೆ ಖರ್ಚು ಮಾಡಲು ನನ್ನಲ್ಲಿ ಸಾಕಷ್ಟು ಹಣವಿಲ್ಲ ಎಂದು ಬಂಗೇರರು ಹೇಳಿದ ವಿಡಿಯೋ ಸಹಿತ ವರದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಶಾಸಕ ವಸಂತ ಬಂಗೇರ ಅವರು, ರಾಜಕೀಯ ನಿವೃತ್ತಿ ವಿಚಾರ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಬಂದಂತಹ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ನೀಡಿದ್ದಾರೆ.

Leave A Reply

Your email address will not be published.