ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಜನವರಿ 20 ಕೊನೆಯ ದಿನ

ಬೆಂಗಳೂರು: ವಿಜಯಪುರ, ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ಖಾಲಿ ಇರುವ 39 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿಜಯಪುರ, ಬಾಗಲಕೋಟೆ ಜಿಲ್ಲಾ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸಬೇಕು.ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ವಿದ್ಯಾರ್ಹತೆ ಹಾಗೂ ವೇತನ: ಸಂಬಂಧಿತ ಹುದ್ದೆಗಳ ಶೈಕ್ಷಣಿಕ ವಿದ್ಯಾರ್ಹತೆ ಹಾಗೂ ವೇತನ ಶ್ರೇಣಿಗಾಗಿ ಈ ಕೆಳಗೆ ನೀಡಿರುವ ವೆಬ್‌ಸೈಟ್‌ನ ಅಧಿಸೂಚನೆಯನ್ನು ನೋಡಿ ತಿಳಿಯಬಹುದು.

ವಯಸ್ಸು:

ಸಾಮಾನ್ಯ ಅಭ್ಯರ್ಥಿಗಳು: ಕನಿಷ್ಠ 18, ಗರಿಷ್ಠ 35

ಒಬಿಸಿ ಅಭ್ಯರ್ಥಿಗಳು: ಕನಿಷ್ಠ 18, ಗರಿಷ್ಠ 38

ಪ.ಜಾತಿ/ಪ.ಪಂಗಡ ಅಭ್ಯರ್ಥಿಗಳು: ಕನಿಷ್ಠ 18, ಗರಿಷ್ಠ 40

ನೇಮಕಾತಿ ವಿಧಾನ:
ಲಿಖಿತ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಕನ್ನಡ ಭಾಷೆ, ಇಂಗ್ಲಿಷ್‌, ಸಾಮಾನ್ಯ ಜ್ಞಾನ, ಸಹಕಾರ, ಸಹಕಾರಿ ಕಾನೂನು, ಭಾರತೀಯ ಸಂವಿಧಾನ, ಕಂಪ್ಯೂಟರ್‌, ಹಾಲು ಒಕ್ಕೂಟಕೆ ಸಂಬಂಧಿಸಿದ ವಿಷಯಗಳ ಮೇಲಿನ ಪ್ರಶ್ನೆಪತ್ರಿಕೆಯನ್ನು ನೀಡಲಾಗುವುದು.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 20-01-2022

ಒಕ್ಕೂಟದ ಅಧಿಕೃತ ವೆಬ್‌ ಸೈಟ್‌:

Home

Leave A Reply

Your email address will not be published.