ಶಿರಾಡಿ : ಘನತ್ಯಾಜ್ಯ ಘಟಕಕ್ಕೆ ಮಂಜೂರಾಗಿದ್ದ ಜಾಗ ಅತಿಕ್ರಮಣ ,ಪೊಲೀಸ್ ಬಂದೋಬಸ್ತ್‌ನಲ್ಲಿ ತೆರವುಗೊಳಿಸಿದ ಗ್ರಾ.ಪಂ

ಕಡಬ : ಕಡಬ ತಾಲೂಕಿನ ಶಿರಾಡಿ ಗ್ರಾಮ ಪಂಚಾಯತ್‌ನ ಘನತ್ಯಾಜ್ಯ ಘಟಕಕ್ಕೆ ಮಂಜೂರಾಗಿದ್ದ ಸರಕಾರಿ ಜಾಗದ ಅತಿಕ್ರಮಣವನ್ನು ಪೊಲೀಸ್ ಬಂದೋಬಸ್ತ್‌ನಲ್ಲಿ ಡಿ.೨೧ರಂದು ತೆರವುಗೊಳಿಸಲಾಗಿದೆ.

ಶಿರಾಡಿ ಗ್ರಾಮದ ಪದಂಬಳ ಎಂಬಲ್ಲಿ ಸರ್ವೆ ನಂಬ್ರ 87\1ರ ಪೈಕಿ 50 ಸೆಂಟ್ಸ್ ಜಾಗವನ್ನು ಘನತ್ಯಾಜ್ಯ ಘಟಕಕ್ಕೆ ಕಾಯ್ದಿರಿಸಲಾಗಿತ್ತು. ಆದರೆ ಈ ಜಾಗವನ್ನು ಸ್ಥಳೀಯರೊಬ್ಬರು ಅತಿಕ್ರಮಿಸಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಜೆಸಿಬಿ ಬಳಸಿ ಅತಿಕ್ರಮಣವನ್ನು ಗ್ರಾ.ಪಂ ತೆರವುಗೊಳಿಸಿದೆ. ಈ ಸಂದರ್ಭದಲ್ಲಿ ಶಿರಾಡಿ ಗ್ರಾ.ಪಂ.ಪಿಡಿಒ ವೆಂಕಟೇಶ್, ಗ್ರಾಮಕರಣಿಕ ಸಂತೋಷ್, ಗ್ರಾ.ಪಂ.ಅಧ್ಯಕ್ಷೆ ವಿನಿತಾ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ನೆಲ್ಯಾಡಿ ಹೊರಠಾಣೆ ಪೊಲೀಸರು ಬಂದೋಬಸ್ತ್ ಒದಗಿಸಿದ್ದರು.

Leave A Reply

Your email address will not be published.