ಪೊಲೀಸ್ ಜೀಪೊಂದು ನಿಯಂತ್ರಣ ತಪ್ಪಿ ಬಸ್ ಸ್ಟ್ಯಾಂಡ್ ಗೇ ನುಗ್ಗಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಎಡಪದವು ವಿವೇಕಾನಂದ ಜೂನಿಯರ್ ಕಾಲೇಜು ಮುಂಭಾಗದಲ್ಲಿರುವ ಬಸ್ ಸ್ಟಾಂಡ್ ನಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಮಂಗಳೂರು ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯ ಇಸ್ಪೆಕ್ಟರ್ ರೇವತಿ ಇದ್ದರು.
ಅಪಘಾತದಲ್ಲಿ ಇನ್ಸ್ಪೆಕ್ಟರ್ ರೇವತಿ ಅವರ ಕೈಗೆ ಗಾಯವಾಗಿದೆ. ಘಟನೆ ನಡೆಯುತ್ತಿದ್ದಂತೆಯೇ ಧಾವಿಸಿ ಬಂದ ಎಡಪದವು ಪಂಚಾಯತ್ ಅಧ್ಯಕ್ಷ ಸುಕುಮಾರ್ ದೇವಾಡಿಗ ಮತ್ತು ಸ್ಥಳೀಯರು ರೇವತಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅಪಘಾತದಲ್ಲಿ ಪೊಲೀಸ್ ಜೀಪ್ ಸಂಪೂರ್ಣ ಜಖಂಗೊಂಡಿದ್ದು, ಬಸ್ ಸ್ಟಾಂಡ್ ಪುಡಿ ಪುಡಿಯಾಗಿದೆ ಎಂದು ತಿಳಿದುಬಂದಿದೆ.