ಉಡುಪಿ: ಹೆಚ್ಚುತ್ತಿರುವ ಕೊರೋನ ಸೋಂಕಿತರ ಸಂಖ್ಯೆ!! ಮುನ್ನೆಚ್ಚರಿಕೆಯಾಗಿ ಐದು ಕಡೆ ಕಂಟೈನ್ ಮೆಂಟ್ ವಲಯ

ಉಡುಪಿ:ಜಿಲ್ಲೆಯಲ್ಲಿ ಮಹಾಮಾರಿ ಕೊರೋನ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಕೆಲ ಸ್ಥಳಗಳನ್ನು ಕಂಟೈನ್ ಮೆಂಟ್ ಜೋನ್ ಆಗಿ ಮಾಡಲಾಗಿದೆ.

ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಸೊಂಕೀತರ ಸಂಖ್ಯೆ ಕೊಂಚ ಏರಿಕೆಯಾಗಿದ್ದು, ಈ ಬಗ್ಗೆ ಮುನ್ನೆಚ್ಚರಿಕೆಯ ಕ್ರಮ ಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ ಸಚಿವ ಸುನಿಲ್ ಕುಮಾರ್, ಸೋಂಕು ಹರಡದಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಅದೇಶಿಸಿದ್ದಾರೆ.

ಅದರಂತೆ ಉಡುಪಿಯ ಎಂ.ಐ.ಟಿ ಕ್ಯಾಂಪಸ್ ನ 7ಹಾಗೂ 10ನೇ ಬ್ಲಾಕ್, ನ್ಯೂ ಇಂಟರ್ ನ್ಯಾಷನಲ್ ಹಾಸ್ಟೆಲ್, ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಸಂಪರ್ಕಿಸುವ ರಸ್ತೆ ಬದಿಯಲ್ಲಿರುವ ಎರಡು ಅಪಾರ್ಟ್ಮೆಂಟ್ ಗಳನ್ನು ಕಂಟೈನ್ ಮೆಂಟ್ ವಲಯಗಳನ್ನಾಗಿ ಮಾಡಲಾಗಿದೆ.

Leave A Reply

Your email address will not be published.