ಕೇಂದ್ರ ಸರ್ಕಾರದ ಸಚಿವರೊಬ್ಬರ ಮನೆಯ ಮುಂದೆಯೇ ನಡೆಯಿತು ಭೀಕರ ಕೊಲೆ!! ಕೋರ್ಟ್ ಗೆ ತೆರಳಿ ವಾಪಾಸ್ಸಾಗುತ್ತಿದ್ದಾಗ ರಿಯಲ್ ಎಸ್ಟೇಟ್ ಉದ್ಯಮಿಯ ಮಚ್ಚಿನಿಂದ ಕಡಿದು ಕೊಂದ ದುಷ್ಕರ್ಮಿಗಳು!!!

ದುಷ್ಕರ್ಮಿಗಳ ಮಚ್ಚಿನೇಟಿಗೆ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಬರ್ಬರವಾಗಿ ಸಾವನ್ನಪ್ಪಿದ್ದ ಘಟನೆ ಬೆಂಗಳೂರಿನ ಆನೇಕಲ್ ನ ಶಿವಾಜಿ ವೃತ್ತದ ಬಳಿ ನಡೆದಿದ್ದು,ಮೃತ ವ್ಯಕ್ತಿಯನ್ನು ರಾಜಶೇಖರ್ ರೆಡ್ಡಿ ಎಂದು ಗುರುತಿಸಲಾಗಿದೆ.

ತನ್ನ ಜಾಮೀನಿನ ವಿಚಾರದಲ್ಲಿ ಕೋರ್ಟ್ ಗೆ ತೆರಳಿ ಮರಳುತ್ತಿದ್ದಾಗ ಈ ಘಟನೆ ನಡೆದಿದ್ದು, ಮೂರು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಒಂದು ಸುತ್ತು ಗುಂಡು ಹಾರಿಸಿ ಆ ಬಳಿಕ ಮಚ್ಚಿನಿಂದ ಹಿಗ್ಗಾ ಮುಗ್ಗ ಕಡಿದಿದ್ದಾರೆ ಎನ್ನಲಾಗಿದೆ.

ಕೇಂದ್ರದ ಮಂತ್ರಿಯೊಬ್ಬರ ಮನೆಯ ಮುಂದೆಯೇ ಈ ಘಟನೆ ನಡೆದಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ರೆಡ್ಡಿ ಯ ಪ್ರಾಣಪಕ್ಷಿ ಸ್ಥಳದಲ್ಲೇ ಹಾರಿಹೋಗಿತ್ತು. ಘಟನೆ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಚುರುಕುಗೊಂಡಿದೆ.

Leave A Reply

Your email address will not be published.