ಕಾರಿನ ಸ್ಟೆಪ್ನಿ ಬದಲಾಯಿಸುತ್ತಿದ್ದ ವೇಳೆ ಲಾರಿ ಹರಿದು ಇಬ್ಬರು ಶಬರಿಮಲೆ ಸ್ವಾಮಿ ಭಕ್ತರ ದುರ್ಮರಣ

ಚಿಕ್ಕಬಳ್ಳಾಪುರ : ಶಬರಿಮಲೆ ಅಯ್ಯಪ್ಪ ದರ್ಶನ ಪಡೆದು ವಾಪಸ್ ಬರುತ್ತಿದ್ದ ವೇಳೆ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ರೆಡ್ಡಿಗೊಲ್ಲವಾರಹಳ್ಳಿ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಈ ಅಪಘಾತ ಸಂಭವಿಸಿದೆ.

ಪಂಚರ್ ಆಗಿದ್ದ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿ ಸ್ಟೆಪ್ನಿ ಬದಲಾಯಿಸುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿ, ಕಾರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಧರಣೀಶ್ ( 22) ಹಾಗೂ ನಿರಂಜನ್ ಸಿಂಗ್ ( 52) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರು ಆಂಧ್ರಮೂಲದವರು. ಲಾರಿ ಚಾಲಕ ಸ್ಥಳದಲ್ಲೇ ಪರಾರಿಯಾಗಿದ್ದಾನೆ‌. ಪೇರಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.