ಸುಳ್ಯ : ಟಪ್ಪಾಲುಕಟ್ಟೆ – ಕಾಪುತಡ್ಕ- ಪೊದೆ- ದೇವರಕಾನ- ಸಮಹಾದಿ ರಸ್ತೆ ದುರಸ್ತಿಗೆ ಆಗ್ರಹ

ಸುಳ್ಯ : ಸುಳ್ಯ ತಾಲೂಕು ಮುಪ್ಪೇರ್ಯ ಗ್ರಾಮದಲ್ಲಿ ಹಾದು ಹೋಗುವ ಟಪ್ಪಾಲುಕಟ್ಟೆ – ಕಾಪುತಡ್ಕ- ಪೊದೆ- ದೇವರಕಾನ- ಸಮಹಾದಿ ರಸ್ತೆಯು ತೀರಾ ಹದಗೆಟ್ಟಿದ್ದು ದುರಸ್ತಿಗೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಈ ರಸ್ತೆಯು ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಪೂದೆ ಶ್ರೀ ಗಣಪತಿ ಹಾಗೂ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಮತ್ತು ದೇವರಕಾನ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನಕ್ಕೆ ನೇರ ಸಂಪರ್ಕ ಒದಗಿಸುತ್ತದೆ.

ಅಲ್ಲದೇ ಈ ಪರಿಸರ ಹಲವು ಮನೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು ,ಈ ರಸ್ತೆಯನ್ನು ಅಭಿವೃದ್ಧಿ ಪಡಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Leave A Reply

Your email address will not be published.