ಮೇಕೆದಾಟು ಪಾದಯಾತ್ರೆಗೆ ಹೈಕೋರ್ಟ್ ಗುದ್ದು | ಪಾದಯಾತ್ರೆ ಮೊಟಕುಗೊಳಿಸಿದ ಸಿದ್ದು

ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ಕುರಿತು ಹೈಕೋರ್ಟ್ ತರಾಟೆ ತೆಗೆದುಕೊಳ್ಳುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ತಳಮಳ ಆರಂಭವಾಗಿದೆ.

ಮಾಜಿ ಸೀಎಂ. ವಿಪಕ್ಷ ನಾಯಕ ಸಿದ್ದರಾಮಯ್ಯ , ಪಾದಯಾತ್ರೆ ಅರ್ಧಕ್ಕೆ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಾಸ್ ಆಗಿದ್ದು, ಪಾದಯಾತ್ರೆ ನಿಯಂತ್ರಣಕ್ಕೆ ಸರಕಾರವೂ ಸಿದ್ದತೆ ನಡೆಸಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ತುರ್ತು ಸಭೆ ಆರಂಭವಾಗಿದೆ.

ಹೈಕೋರ್ಟ್ ಚಾಟಿ ಏಟು ನೀಡಿದ ಬೆನ್ನಲ್ಲೆ ಕೆಪಿಸಿಸಿ ಕಾನೂನು ವಿಭಾಗದ ಮುಖ್ಯಸ್ಥ ಪೊನ್ನಣ್ಣ ಜೊತೆ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಚರ್ಚೆ ನಡೆಸಿದರು.

ಪೊನ್ನಣ್ಣ ಜೊತೆ ಮಾತುಕತೆ ಬಳಿಕ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆನ್ನು ನೋವಿನ‌ಕಾರಣ ನೀಡಿ ಅವರು ವಾಪಾಸ್ ಆಗಿದ್ದಾರೆ.

Leave A Reply

Your email address will not be published.