ಕಡಬ : ಬಾಲಕಿಯ ಅತ್ಯಾಚಾರಗೈದು ಗರ್ಬಿಣಿಯಾಗಿಸಿದ ಪ್ರಕರಣ | ಆರೋಪಿ ಪೊಲೀಸ್ ಶಿವರಾಜ್‌ ಜಾಮೀನು ಅರ್ಜಿ ತಿರಸ್ಕೃತ

ಕಡಬ : ಅತ್ಯಾಚಾರ ಸಂತ್ರಸ್ತ ಬಾಲಕಿಗೆ ಕಾನೂನು ನೆರವು ನೀಡುವ ನೆಪದಲ್ಲಿ ಸಲುಗೆ ಬೆಳೆಸಿ ಬಳಿಕ ಅತ್ಯಾಚಾರ ನಡೆಸಿ ಗರ್ಭಿಣಿಯಾಗಿಸಿದ ಆರೋಪದಡಿ ಬಂಧಿತನಾಗಿರುವ ಕಡಬ ಠಾಣೆ ಪೊಲೀಸ್ ಕಾನ್‌ಸ್ಟೆಬಲ್ ಶಿವರಾಜ್ ಎಂಬಾತನ ಜಾಮೀನು ಅರ್ಜಿಯನ್ನು ಪುತ್ತೂರಿನ 5 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂತೂರು ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಗರ್ಭಿಣಿಯಾಗಿಸಿದ ಪ್ರಕರಣದಲ್ಲಿ ಆರೋಪಿ ಶಿವರಾಜ್ ನನ್ನು ಸೆ. 28 ರಂದು ಪೊಲೀಸರು ಬಂಧಿಸಿದ್ದರು. ಆರೋಪಿಯ ವಿರುದ್ಧ ಬಾಲಕಿಯ ತಂದೆ ನೀಡಿದ ದೂರಿನಂತೆ ಅತ್ಯಾಚಾರ, ಸಾಕ್ಷಿ ನಾಶ ಹಾಗೂ ಪೊಕ್ಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

Leave A Reply

Your email address will not be published.