ಜಗಳೂರಿನಲ್ಲಿ ಭೀಕರ ಅಪಘಾತ : ಸ್ಥಳದಲ್ಲೇ 7 ಮಂದಿಯ ದುರ್ಮರಣ

ದಾವಣಗೆರೆ : ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಭೀಕರ ಅಪಘಾತ ನಡೆದಿದೆ. ವೇಗವಾಗಿ ಚಲಿಸುತ್ತಿದ್ದ ಇಂಡಿಕಾ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ದುರಂತ ನಡೆದಿದೆ.

ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಕಾನನಕಟ್ಟೆ ಗ್ರಾಮದ ಸಮೀಪ ಈ ಭೀಕರ ಅಪಘಾತ ನಡೆದಿದೆ.

ಈ ಅಪಘಾತದಲ್ಲಿ ಕಾರಿನಲ್ಲಿದ್ದ 6 ಜನ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಆಸ್ಪತ್ರೆಗೆ ಓರ್ವನನ್ನು ಸಾಗಿಸುವಾಗಲೇ ಕೊನೆಯುಸಿರೆಳೆದಿದ್ದಾನೆ. ಮೃತರು ಯಾದಗಿರಿ ಜಿಲ್ಲೆಯ ಶಹಾಪುರ ನಿವಾಸಿಗಳು ಎಂದು ತಿಳಿದು ಬಂದಿದೆ. ಬೆಂಗಳೂರಿನಿಂದ ಹೊಸಪೇಟೆ ಕಡೆ ತೆರಳುತ್ತಿದ್ದ ವೇಳೆ ಈ ಭೀಕರ ಅಪಘಾತ ನಡೆದಿದೆ.

Leave A Reply

Your email address will not be published.