ಹಣಕಾಸಿನ ವಿಚಾರಕ್ಕೆ ಆಟೋ ಚಾಲಕನ ಬರ್ಬರವಾಗಿ ಹತ್ಯೆ!! ಘಟನೆ ನಡೆದು 24 ಗಂಟೆಯೊಳಗೆ ಆರೋಪಿಗಳ ಬಂಧನ

ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ ನಡೆದ ಆಟೋ ಚಾಲಕನೋರ್ವನ ಬರ್ಬರ ಹತ್ಯೆಯ ಆರೋಪಿಗಳನ್ನು ಘಟನೆ ನಡೆದು 24 ಗಂಟೆಯೊಳಗೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನೂರ್ ಅಹ್ಮದ್ ಬುಡ್ಡೆಸಾಬ್ ನಾಯಿಕ್ ಹಾಗೂ ಸಮೀರ ರಫೀಕ್ ನಾಯಿಕ್ ಎಂದು ಗುರುತಿಸಲಾಗಿದೆ.

ಘಟನೆ ವಿವರ: ಮೃತ ಆಟೋ ಚಾಲಕ ಶಿವಶಂಕರ ಬಡಾವಣೆಯ ನಿವಾಸಿ ಆಸೀಫ್ ಮೆಹಬೂಬ್ ಜಿನಾವರ್ ಎಂಬಾತನನ್ನು ಬರ್ಬರವಾಗಿ ಕೊಲೆ ನಡೆಸಲಾಗಿತ್ತು. ಪ್ರೇಮದ ಕಾರಣದಿಂದಾಗಿ ಕೊಲೆ ನಡೆಸಲಾಗಿದೆ ಎಂದು ಅನುಮಾನಿಸಲಾಗಿದ್ದು,ಪ್ರಾಥಮಿಕ ತನಿಖೆಯ ಬಳಿಕ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕೊಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

Leave A Reply

Your email address will not be published.