ನೇತ್ರಾವತಿ ಸೇತುವೆಯಲ್ಲಿ ಅಪಘಾತ: ಬೈಕ್ ಸವಾರ ಮೃತ್ಯು

ಮಂಗಳೂರು : ಜಪ್ಪಿನಮೊಗರು ಸಮೀಪದ ನೇತ್ರಾವತಿ ಸೇತುವೆಯಲ್ಲಿ ಬುಧವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟಿದ್ದಾರೆ.

ಉರ್ವ ಸಮೀಪದ ಸಚಿನ್ (32) ಮೃತಪಟ್ಟ ಬೈಕ್ ಸವಾರ. ಬುಧವಾರ ರಾತ್ರಿ ಸುಮಾರು 11:45ಕ್ಕೆ ಬೈಕ್ ಸ್ಕಿಡ್ ಆದ ಪರಿಣಾಮ ಇಲೆಕ್ಟಿಕಲ್ ಡೆಕರೇಟರ್ ಆಗಿದ್ದ ಸಚಿನ್ ಗಂಭೀರ ಗಾಯಗೊಂಡು, ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದೀಗ ಚಿಕಿತ್ಸೆ ಫಲಕಾರಿಯಾಗದೆ‌ ಸಚಿನ್ ಮೃತಪಟ್ಟಿದ್ದಾರೆ.

Leave A Reply

Your email address will not be published.