ಧರ್ಮಸ್ಥಳ: ರಾಜ್ಯ ಹೆದ್ದಾರಿಯ ಪಕ್ಕದಲ್ಲೇ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಅಪರಿಚಿತ ವ್ಯಕ್ತಿ!! ಸಾವಿನ ಸುತ್ತ ಹಲವು ಅನುಮಾನ-ಸ್ಥಳಕ್ಕೆ ಪೊಲೀಸರ ಭೇಟಿ

ಧರ್ಮಸ್ಥಳ: ಧರ್ಮಸ್ಥಳ-ಉಜಿರೆ ರಾಜ್ಯ ಹೆದ್ದಾರಿಯ ನೀರಚಿಲುಮೆ ಗ್ರೀನ್ ಪಾರ್ಕ್ ಎಂಬಲ್ಲಿ ರಸ್ತೆ ಬದಿಯ ವಿದ್ಯುತ್ ಕಂಬದ ಪಕ್ಕದಲ್ಲಿಯೇ ಅಪರಿಚಿತ ವ್ಯಕ್ತಿಯೊರ್ವರು ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಇಂದು ಮುಂಜಾನೆ ಬೆಳಕಿಗೆ ಬಂದಿದೆ.

ನೀರಚಿಲುಮೆ ಎಂಬಲ್ಲಿ ಘಟನೆಯನ್ನು ಕಂಡ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದಾಗ ವ್ಯಕ್ತಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದ್ದು, ಸದ್ಯ ಧರ್ಮಸ್ಥಳ ಪೊಲೀಸರಿಗೆ ವಿಷಯ ತಿಳಿಸಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಸಾವಿನ ಸುತ್ತ ಹಲವು ಅನುಮಾನಗಳು ಎದ್ದಿದ್ದು, ಅಪರಿಚಿತ ವ್ಯಕ್ತಿ ಯಾರೆಂದು ಪತ್ತೆಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave A Reply

Your email address will not be published.