ಮೂಡುಬಿದಿರೆ:ಪಾದಚಾರಿಗೆ ಕಾರು ಡಿಕ್ಕಿ |ಸ್ಥಳದಲ್ಲೇ ಸಾವು

ಮೂಡಬಿದಿರೆ: ಕಲ್ಲಮುಂಡೂರು ಪೇಟೆಯ ರಸ್ತೆಯಲ್ಲಿ ರಿಟ್ಸ್ ಕಾರು ಪಾದಚಾರಿಯೋರ್ವರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ವ್ಯಕ್ತಿ ಮೃತಪಟ್ಟ ಘಟನೆ ನಿನ್ನೆ ರಾತ್ರಿ ವೇಳೆ ನಡೆದಿದೆ.

ಮೃತರನ್ನು ಸಂಪಿಗೆಯ ಇಡ್ಡಬೆಟ್ಟು ನಿವಾಸಿ
ಹರೀಶ್(50) ಎಂದು ಗುರುತಿಸಲಾಗಿದೆ.

ಹರೀಶ್ ಅವರು ಎಂದಿನಂತೆ ಸಂಜೆ ವೇಳೆ ಸಂಪಿಗೆಯಿಂದ ಕಲ್ಲಮುಂಡೂರು ಪೇಟೆಗೆ ಹೋಗಿದ್ದು ನಂತರ ಹಿಂತಿರುಗಿ ನಡೆದುಕೊಂಡು ಬರುತ್ತಿದ್ದ ಸಂದರ್ಭದಲ್ಲಿ ರಿಟ್ಸ್ ಕಾರು ಢಿಕ್ಕಿ ಹೊಡೆದು ನೆಲಕ್ಕೆ ಬಿದ್ದ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ಢಿಕ್ಕಿ ಹೊಡೆದ ಕಾರು ಪರಾರಿಯಾಗಿದ್ದು, ಯಾರೆಂದು ಇನ್ನೂ ತಿಳಿದು ಬಂದಿಲ್ಲ.

Leave A Reply

Your email address will not be published.