ಕರ್ನಾಟಕದಲ್ಲಿ 75 ‘ ನೇತಾಜಿ ಅಮೃತ ಶಾಲೆ’ ಘೋಷಣೆ ಮಾಡಿದ ರಾಜ್ಯ ಸರಕಾರ|ಈ ಶಾಲೆಗೆ ಇರುವ ವಿಶೇಷ ಅನುಕೂಲಗಳ ಕುರಿತು ಇಲ್ಲಿದೆ ಮಾಹಿತಿ

ರಾಜ್ಯದಲ್ಲಿ ಪ್ರತಿ ಜಿಲ್ಲೆಗೆ ಕನಿಷ್ಠ 2 ರಂತೆ ಒಟ್ಟು 75 ಸರಕಾರಿ ಶಾಲೆಗಳನ್ನು ಆಯ್ಕೆ ಮಾಡಿ, ಆ ಶಾಲೆಗಳನ್ನು ‘ನೇತಾಜಿ ಅಮೃತ ಶಾಲೆ’ ಗಳೆಂದು ಘೋಷಣೆ ಮಾಡಿದೆ. ಈ ಬಗ್ಗೆ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರಕಾರದ ಅಪರ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದೆ.

ನೇತಾಜಿ ಅಮೃತ ಶಾಲೆಗಳೆಂದು ಘೋಷಿಸಲ್ಪಟ್ಟ ಪ್ರತಿ ಶಾಲೆಯಿಂದ 100 ವಿದ್ಯಾರ್ಥಿಗಳಂತೆ ಒಟ್ಟು 7500 ವಿದ್ಯಾರ್ಥಿಗಳಿಗೆ ಎನ್ ಸಿ ಸಿ ತರಬೇತಿಯನ್ನು ನೀಡಲು ಅನುಕೂಲವಾಗುವಂತೆ ಅದಕ್ಕೆ ತಗಲುವ ವೆಚ್ಚ ಒಬ್ಬ ವಿದ್ಯಾರ್ಥಿಗೆ ರೂ.12,000 ರಂತೆ ಅನುದಾನ ಮಂಜೂರು ಮಾಡಲಾಗುವುದು.

ರಾಜ್ಯದಲ್ಲಿ ಪ್ರತಿ ಜಿಲ್ಲೆಯ 2 ಶಾಲೆಗಳಂತೆ 75 ಶಾಲೆಗಳನ್ನು ನೇತಾಜಿ ಅಮೃತ ಶಾಲೆಗಳೆಂದು ಸರಕಾರ ಘೋಷಣೆ ಮಾಡಿದೆ. ಈ ಶಾಲೆಗಳಲ್ಲಿ ಎನ್ ಸಿಸಿ ಘಟಕಗಳನ್ನು ಸ್ಥಾಪಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave A Reply

Your email address will not be published.