ಬೆಳ್ತಂಗಡಿ:ಅನಾರೋಗ್ಯದಿಂದ ಬಳಲುತ್ತಿದ್ದ ಬದ್ಯಾರ್ ನ ಬಾಲಕಿ ಮೃತ್ಯು

ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿದ್ದ ಬದ್ಯಾರ್
ನ ಬಾಲಕಿ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಬೆಂಗಳೂರಿನ ಆಸ್ಟರ್ ಸಿಎಂಐ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪಡಂಗಡಿ ಗ್ರಾಮದ ಬದ್ಯಾರ್ ನಿವಾಸಿ ವಿಲಿಯಂ ಹಾಗೂ ಅನಿತಾ ಡಿಸಿಲ್ವ ಅವರ ಮಗಳು ಏಂಜಲ್ ಅನುಷಾ ಡಿಸಿಲ್ವ.

ವಾರದ ಹಿಂದೆ ಏಕಾಏಕಿ ಅನಾರೋಗ್ಯಕ್ಕೀಡಾದ ಬಾಲಕಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅರಸಿನ ಕಾಮಾಲೆ ಕಾಯಿಲೆಯಿಂದ
ಬಾಲಕಿಯ ಲಿವರ್ ಜರ್ಝರಿತಗೊಂಡಿದ್ದು, ಲಿವರ್ ಕಸಿ ಮಾಡಲು ಸೋಮವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಜೀವನ್ಮರಣ ಹೋರಾಟದ ಬಳಿಕ ಇಂದು ಕೊನೆಉಸಿರೆಳೆದಿದ್ದಾರೆ.

ಬಾಲಕಿ ಏಂಜಲ್ ಅನುಷಾ ಡಿಸಿಲ್ವ ಬೆಳ್ತಂಗಡಿ ಚರ್ಚ್ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಪಠ್ಯ ಹಾಗೂ ಪಠ್ಯತೇರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದಳು.

Leave A Reply

Your email address will not be published.