ಪುತ್ತೂರು : ಎ.ಸಿ. ಡಾ.ಯತೀಶ್ ಉಳ್ಳಾಲ್ ಅವರಿಗೆ ವರ್ಗಾವಣೆ ,ನೂತನ ಎ.ಸಿ.ಯಾಗಿ ಗಿರೀಶ್ ನಂದನ್

ಪುತ್ತೂರು:ಹಾಸನ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಮುಖ್ಯ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆಎಎಸ್ ಕಿರಿಯ ಶ್ರೇಣಿಯ ಅಧಿಕಾರಿ ಗಿರೀಶ್‌ನಂದನ್ ಎಂ.ಅವರನ್ನು ಪುತ್ತೂರು ಉಪವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ನೇಮಕಗೊಳಿಸಿ ವರ್ಗಾವಣೆ ಮಾಡಿ ಸರಕಾರ ಆದೇಶಿಸಿದೆ.

ಪುತ್ತೂರು ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ| ಯತೀಶ್ ಉಳ್ಳಾಲ್ ಅವರ ಸ್ಥಾನಕ್ಕೆ ಗಿರೀಶ್‌ನಂದನ್ ಅವರನ್ನು ವರ್ಗಾವಣೆಗೊಳಿಸಲಾಗಿದೆ.

ಆದರೆ ಡಾ|ಯತೀಶ್ ಉಳ್ಳಾಲ್ ಅವರಿಗೆ ಕರ್ತವ್ಯದ ಸ್ಥಳ ತೋರಿಸಲಾಗಿಲ್ಲ.ಅವರು ಮಡಿಕೇರಿ ಉಪವಿಭಾಗಾಧಿಕಾರಿಯಾಗಿ ನೇಮಕಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಗಿರೀಶ್‌ನಂದನ್ ಅವರು ಎತ್ತಿನಹೊಳೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದರು.ಬಿಎ.,ಎಂಬಿಎ ಪದವೀಧರರಾಗಿರುವ ಇವರು ಬೆಂಗಳೂರು ನಗರ ಜಿಲ್ಲೆ ನಿವಾಸಿಯಾಗಿದ್ದು ೨೦೧೭ರ ಬ್ಯಾಚ್‌ನ ಕೆಎಎಸ್ ಅಧಿಕಾರಿ.

Leave A Reply

Your email address will not be published.