ಹಿಜಾಬ್ ಪ್ರಕರಣ | ಇಂದು ಕೋರ್ಟ್ ನಲ್ಲಿ ಅರ್ಜಿ ಕುರಿತು ಏನಾಯ್ತು ? ಹೆಚ್ಚಿನ ವಿವರ ಇಲ್ಲಿದೆ

ಉಡುಪಿ ಕಾಲೇಜು ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ರಿಟ್ ಬಗ್ಗೆ ಇಂದು ವಿಚಾರಣೆ ನಡೆಯಬೇಕಿತ್ತು. ವಿದ್ಯಾರ್ಥಿನಿಯೋರ್ವಳು ಕೋರಿರುವ ಈ ಮನವಿಯನ್ನು ಹೈಕೋರ್ಟ್ ಮಂಗಳವಾರ ( ಫೆ. 8 ) ಕ್ಕೆ ಮುಂದೂಡಿದೆ.

ಸಂವಿಧಾನದ 14 ಮತ್ತು 25 ನೇ ವಿಧಿಯಡಿ ಇಸ್ಲಾಂ ಧರ್ಮದಲ್ಲಿ ಹಿಜಾಬ್ ಧರಿಸುವುದು ಮೂಲಭೂತ ಹಕ್ಕಿನ ಭಾಗ ಎಂದು ವಿದ್ಯಾರ್ಥಿನಿ ರೇಶಮ್ ಹೈ ಕೋರ್ಟ್ ಗೆ ಮನವಿ ಸಲ್ಲಿಸಿದ್ದರು.

ಅರ್ಜಿಯನ್ನು ರಾಜ್ಯ ಸರಕಾರ, ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜು, ಉಡುಪಿ ಜಿಲ್ಲಾಧಿಕಾರಿ ಮತ್ತು ಪದವಿ ಪೂರ್ವ ಶಿಕ್ಷಣ ಮಂಡಳಿಯ ನಿರ್ದೇಶಕರನ್ನು ಪ್ರತಿವಾದಿಗಳನ್ನಾಗಿಸಲಾಗಿತ್ತು.

ಬುಧವಾರ ಈ ಪ್ರಕರಣದ ಮನವಿ ವಿಚಾರಣೆಯನ್ನು ಕೈಗೆತ್ತಿಕೊಂಡ ಪೀಠ ನ್ಯಾ. ಕೃಷ್ಣ ಎಸ್ ದೀಕ್ಷಿತ್ ನೇತೃತ್ವದ ಏಕಸದಸ್ಯ ಪೀಠದ ಮುಂದೆ ಸರಕಾರದ ಪರವಾಗಿ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು ವಾದಿಸಿದ್ದರು. ಈ ಪ್ರಕರಣವನ್ನು ಒಟ್ಟಾಗಿ ಮುಂದಿನ ವಿಚಾರಣೆಗೆ ನಿಗದಿಪಡಿಸಿದೆ.

ಏಕಸದಸ್ಯ ಪೀಠ ಮಂಗಳವಾರಕ್ಕೆ ( ಫೆ.8) ಪ್ರಕರಣದ ವಿಚಾರಣೆ ಮುಂದೂಡಿದೆ‌.

ಮೂಲಭೂತ ಹಕ್ಕಿನ ಪೈಕಿ ತನ್ನ ಧರ್ಮದ ಆಚರಣೆಯಾದ ಹಿಜಾಬ್ ಧರಿಸುವುದು ಮತ್ತು ಅದನ್ನು ಕಾಲೇಜಿಗೆ ಪ್ರವೇಶಿಸುವ ವಿಚಾರದಲ್ಲಿ ಮಧ್ಯಪ್ರವೇಶ ಮಾಡದಂತೆ ಕಾಲೇಜಿನ ಆಡಳಿತ ಮಂಡಳಿಗೆ ನಿರ್ದೇಶಿಸಬೇಕು ಹಾಗೂ ತನ್ನ ಧಾರ್ಮಿಕ ನಂಬಿಕೆಯ ಭಾಗವಾದ ಹಿಜಾಬ್ ಧರಿಸಲು ಮತ್ತು ಕಾಲೇಜಿಗೆ ಪ್ರವೇಶಿಸಲು ಅವಕಾಶ ಮಾಡುವಂತೆ ಕಾಲೇಜಿಗೆ ಆದೇಶ ನೀಡಬೇಕು ಎಂಬುದಾಗಿ ಕೋರ್ಟ್ ಗೆ ಮನವಿ ಸಲ್ಲಿಸಲಾಗಿದೆ‌.

Leave A Reply

Your email address will not be published.