ಇಡೀ ರಾಜ್ಯವನ್ನೇ ವ್ಯಾಪಿಸುತ್ತಿದೆ ಹಿಜಾಬ್ ವಿವಾದ !!. | ಸಾಂಸ್ಕೃತಿಕ ನಗರಿಯಲ್ಲಿ ಕಾಲೇಜಿಗೆ ಹಿಜಾಬ್ ಧರಿಸಿ ಹೋಗುವ ಮೂಲಕ ಸರ್ಕಾರದ ನಿಯಮಕ್ಕೆ ಸೆಡ್ಡುಹೊಡೆದ ಮುಸ್ಲಿಂ ವಿದ್ಯಾರ್ಥಿನಿಯರು

ಕರಾವಳಿ ಜಿಲ್ಲೆಗಳಲ್ಲಿ ಆರಂಭವಾದ ಹಿಜಾಬ್​ ವಿವಾದ ಇದೀಗ ಇಡೀ ರಾಜ್ಯವನ್ನು ವ್ಯಾಪಿಸುತ್ತಿದ್ದು, ಉಡುಪಿ ಹಾಗೂ ಕುಂದಾಪುರ ಬಳಿಕ ಇದೀಗ ಸಾಂಸ್ಕ್ರತಿಕ ನಗರಿ ಮೈಸೂರಿನಲ್ಲೂ ಹಿಜಾಬ್​ ವಿವಾದ ಪ್ರತಿಧ್ವನಿಸುತ್ತಿದೆ. ಕಾಲೇಜಿಗೆ ಹಿಜಾಬ್ ಧರಿಸಿ ಹೋಗುವ ಮೂಲಕ ಕೆಲ ವಿದ್ಯಾರ್ಥಿನಿಯರು ಸರ್ಕಾರದ ನಿಯಮಕ್ಕೆ ಸೆಡ್ಡು ಹೊಡೆದಿದ್ದಾರೆ.

ವಿದ್ಯಾರ್ಥಿನಿಯರು ಮೈಸೂರಿನ ಬನ್ನಿಮಂಟಪದ ಹೈವೆ ಸರ್ಕಲ್ ಬಳಿ ಹಿಜಾಬ್ ಅಭಿಯಾನ ನಡೆಸುತ್ತಿದ್ದು, ಐ ಲವ್ ಹಿಜಾಬ್ ಎಂಬ ಘೋಷಣಾ ವಾಕ್ಯಗಳನ್ನು ಪ್ರದರ್ಶಿಸಿ, ಪರಸ್ಪರ ಹಿಜಾಬ್​​ ತೊಡಿಸಿ ಪ್ರತಿಭಟಿಸಿದ್ದಾರೆ. ಅಲ್ಲದೇ ಎಲ್ಲಾ ಕಾಲೇಜಿನಲ್ಲೂ ಹಿಜಾಬ್​ಗೆ ಅವಕಾಶ ಕಲ್ಪಿಸುವಂತೆ ವಿದ್ಯಾರ್ಥಿನಿಯರು ಮನವಿ ಮಾಡಿಕೊಂಡಿದ್ದಾರೆ. ಈ ಮೂಲಕ ಉಡುಪಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಬೆಂಬಲ ವ್ಯಕ್ತಪಡಿಸಿದರು.

ಬೆಳಗಾವಿಯ ರಾಮದುರ್ಗ ಕಾಲೇಜಿನಲ್ಲಿಯೂ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗೆ ಬಂದ ಸಂದರ್ಭದಲ್ಲಿ ಪೊಲೀಸರು ಮಧ್ಯ ಪ್ರವೇಶಿಸಿದ ಘಟನೆ ನಡೆಯಿತು.

Leave A Reply

Your email address will not be published.