ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ನುಗ್ಗಿದ ಕಾರು!! ಘಟನೆಯಿಂದಾಗಿ ಹೋಟೆಲ್ ಮಾಲೀಕ ಗಂಭೀರ-ಚಾಲಕ ಅಪಾಯದಿಂದ ಪಾರು

ಉಪ್ಪಿನಂಗಡಿ: ರಾಜ್ಯ ಹೆದ್ದಾರಿಯ ಗಡಿಯಾರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಹೋಟೆಲ್ ಒಂದಕ್ಕೆ ನುಗ್ಗಿ ಬಳಿಕ ಪಕ್ಕದಲ್ಲಿರುವ ಕಂದಕಕ್ಕೆ ಉರುಳಿಬಿದ್ದಿದ್ದು,ಘಟನೆಯಿಂದಾಗಿ ಹೋಟೆಲ್ ಮಾಲೀಕ ಗಂಭೀರ ಗಾಯಗೊಂಡು ಸಿಬ್ಬಂದಿಗಳಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ.

ಅಪಘಾತಕ್ಕೆ ಈಡಾದ ಕಾರು ಮಂಗಳೂರಿನಿಂದ ಉಪ್ಪಿನಂಗಡಿಗೆ ಚಲಿಸುತ್ತಿತ್ತು ಎನ್ನಲಾಗಿದ್ದು,ಗಡಿಯಾರ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಕಾರು ಚಾಲಕ ಅಪಾಯದಿಂದ ಪಾರಾಗಿದ್ದು,ಗಂಭೀರ ಗಾಯಗೊಂಡ ಹೋಟೆಲ್ ಮಾಲೀಕನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Leave A Reply

Your email address will not be published.