ಫೆಬ್ರವರಿ 15 ರಿಂದ 17 ರವರೆಗೆ ಪಾಂಗಳ ಸಿರಿಜಾತ್ರೆ!! ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋರಿಕೆ

ಪಾಂಗಾಳ : ಮುಕ್ಕಾಲಿ ಅಣ್ಣು ಶೆಟ್ಟಿ ಕುಟುಂಬಸ್ಥರ ಆಡಳಿತದ ಶ್ರೀ ಆದಿ ಆಲಡೆ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿ ಜರಗುವ ವೈಭವದ ಸಿರಿ ಜಾತ್ರೆಯು ಇದೇ ಬರುವ ತಾ . 15 , 02 , 2022 ಮಂಗಳವಾರದಂದು ಜರಗಲಿರುವುದು.

ತಾ 15-02-2022 ನೇ ಮಂಗಳವಾರದಂದು ಬೆಳಗ್ಗೆ 11 ಗಂಟೆಗೆ ಧ್ವಜಾರೋಹಣದಿಂದ ಪ್ರಾರಂಭಗೊಂಡು ಮಧ್ಯಾಹ್ನ 12-30 ಕ್ಕೆ ಮಹಾಪೂಜೆ , 12-45 ಕ್ಕೆ ಬ್ರಾಹ್ಮಣ ಸುಹಾಸಿನಿ ಆರಾಧನೆ , ಸಾರ್ವಜನಿಕ ಅನ್ನಸಂತರ್ಪಣೆಯು ನಡೆಯಲಿದೆ.

ರಾತ್ರಿ 08:30 ಕ್ಕೆ ಭಂಡಾರ ಚಾವಡಿಯಿಂದ ಪರಿವಾರ ದೈವಗಳ ಭಂಡಾರ ಹೊರಟು ರಾತ್ರಿ 09-30 ಕ್ಕೆ ವೈಭವ್ ಬೈಗಿನ ಬಲಿ ನಡೆಯಲಿರುವುದು.

ರಾತ್ರಿ 11 ಕ್ಕೆ ಕುಮಾರ ದರ್ಶನ , ರಾತ್ರಿ 1 ಕ್ಕೆ ರಂಗಪೂಜೆ , ರಾತ್ರಿ 2:30 ಕ್ಕೆ ಬ್ರಹ್ಮಮಂಡಲ ,ರಾತ್ರಿ 3:30 ಕ್ಕೆ ಭೂತಬಲಿ , ರಾತ್ರಿ 4:30 ರಿಂದ ತುಲಾಭಾರ ಸೇವೆಗಳು ನಡೆಯಲಿದೆ.

ತಾ. 16.02.2022 ನೇ ಬುಧವಾರ ಬೆಳಿಗ್ಗೆ 11-00 ಕ್ಕೆ ಮಹಾಪೂಜೆ ,ಸಂಜೆ 7-00 ಕ್ಕೆ ತಪ್ಪಂಗಾಯಿ ಬಲಿ , ರಾತ್ರಿ 8:30 ಕ್ಕೆ ದೂಳು ಮಂಡಲ ,ನಂತರ ಭೂತಬಲಿ , ಕವಾಟಬಂಧನ ,ಶಯನೋತ್ಸವ

ತಾ.17.02.2022 ನೇ ಗುರುವಾರ
ಬೆಳಿಗ್ಗೆ 07-00 ಕ್ಕೆ ಕವಾಟೋದ್ಘಾಟನೆ , ನಂತರ ಮಹಾಪೂಜೆ ,ಸಾಯಂಕಾಲ 05:00 ಕ್ಕೆ ಬಲಿ ಹೊರಟು ಕಟ್ಟೆಪೂಜೆ , ಅವಭೃತ ಸ್ನಾನ ನಡೆದು ಧ್ವಜಾವರೋಹಣಗೊಳ್ಳುವುದರ ಮೂಲಕ ಮೂರು ದಿನಗಳ ಗೌಣೋತ್ಸವು ಸಮಾಪ್ತಿಯಾಗುತ್ತದೆ.

ಭಕ್ತಾದಿಗಳು ಕುಟುಂಬ ಸಮೇತರಾಗಿ ಆಗಮಿಸಿ , ಮಹೋತ್ಸವದಲ್ಲಿ ಭಾಗಿಯಾಗಿ ಶ್ರೀ ಬ್ರಹ್ಮಲಿಂಗೇಶ್ವರ ದೇವರ , ನಾಗದೇವರ ಹಾಗೂ ಶ್ರೀ ಧರ್ಮ ದೈವಗಳ ಕೃಪೆಗೆ ಪಾತ್ರರಾಗಿ ಸಿರಿಮುಡಿ ಗಂಧ ಪ್ರಸಾದ ಸ್ವೀಕರಿಸಿ ಕೃತಾರ್ಥರಾಗಬೇಕಾಗಿ ದೇವಸ್ಥಾನದ ಪತ್ರಿಕಾ ಪ್ರಕಟಣೆಯು ತಿಳಿಸಿದೆ

Leave A Reply

Your email address will not be published.