ಹಿಜಾಬ್ ಕೇಸರಿ ಶಾಲು ವಿವಾದ ಪ್ರಕರಣ | ಪೊಲೀಸರ ರಜೆ ರದ್ದುಗೊಳಿಸಿದ ಡಿಜಿ, ಐಜಿಪಿ ‘ ಪ್ರವೀಣ್ ಸೂದ್’ | ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶ

ಬೆಂಗಳೂರು : ರಾಜ್ಯದಲ್ಲಿ ಹಿಜಾಬ್ ಕೇಸರಿ ವಿವಾದ ತಾರಕಕ್ಕೇರಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಗಲಭೆ ಉಂಟಾಗಿದೆ. ಈ ಹಿನ್ನೆಲೆ ರಾಜ್ಯದ ಪೊಲೀಸರ ರಜೆ ರದ್ದುಗೊಳಿಸಿ ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.

ಕೂಡಲೇ ರಜೆಯಲ್ಲಿರುವ ಪೊಲೀಸರು ಕರ್ತವ್ಯಕ್ಕೆ ಹಾಜರಾಗುವಂತೆ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.

ಬುಧವಾರದಿಂದ ಶುಕ್ರವಾರದವರೆಗೆ ರಾಜ್ಯಾದ್ಯಂತ ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಮತ್ತು ಪದವಿ ಕಾಲೇಜುಗಳಿಗೆ ಇದೇ 9 ರಿಂದ 11 ವರೆಗೆ ರಜೆ ಘೋಷಿಸಲಾಗಿದೆ. ಆದರೆ ಈಗಾಗಲೇ ನಡೆಯುತ್ತಿರುವ ಎಂಜಿನಿಯರಿಂಗ್, ಸ್ನಾತಕೋತ್ತರ ಮತ್ತಿತರ ಪರೀಕ್ಷೆಗಳು ಎಂದಿನಂತೆ ನಡೆಯುತ್ತವೆ ಎಂದು ಉನ್ನತವಾದ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

Leave A Reply

Your email address will not be published.