ಮಂಗಳೂರು : ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ | ಹಿರಿಯ ವಕೀಲ ಕೆ ಎಸ್ ಎನ್ ರಾಜೇಶ್ ಭಟ್ ಗೆ ಷರತ್ತುಬದ್ಧ ಜಾಮೀನು ಮಂಜೂರು

ಮಂಗಳೂರು : ಇಂಟರ್ನ್ ಶಿಪ್ ಗೆಂದು ಬಂದ ಕಾನೂನು ವಿದ್ಯಾರ್ಥಿನಿ ಮೇಲೆ ಕಚೇರಿಯಲ್ಲಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಬಂಧನಕ್ಕೊಳಗಾದ ವಕೀಲ ರಾಜೇಶ್ ಭಟ್ ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.

ಹಿರಿಯ ವಕೀಲ‌ ಕೆ.ಎಸ್.ಎನ್. ರಾಜೇಶ್ ಭಟ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಜಾಮೀನು ಪ್ರಕ್ರಿಯೆ ಮುಗಿಸಿ ಇನ್ನೆರಡು ದಿನದಲ್ಲಿ ಬಿಡುಗಡೆಗೊಳ್ಳುವ ಸಾಧ್ಯತೆ ಇದೆ.

ಉತ್ತರ ಪ್ರದೇಶ ಮೂಲದ ವಿದ್ಯಾರ್ಥಿನಿ 2021 ರ ಅಕ್ಟೋಬರ್ ನಲ್ಲಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದರು. ಖಾಸಗಿ ಅಂಗಗಳನ್ನು ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಸಂತ್ರಸ್ತೆ ರಾಜೇಶ್ ವಿರುದ್ಧ ದೂರನ್ನು ನೀಡಿದ್ದರು.

ನಂತರ ತಲೆಮರೆಸಿಕೊಂಡಿದ್ದ ರಾಜೇಶ್ ಡಿ.20 ರಂದು ಮಂಗಳೂರು ನ್ಯಾಯಾಲಯಕ್ಕೆ ಶರಣಾಗಿ, ನಂತರ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಂಡು, ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಅನಂತರ ಜಾಮೀನು ಅರ್ಜಿ ಪ್ರಕ್ರಿಯೆ ಮಂಗಳೂರು ಕೋರ್ಟ್ ಹಾಗೂ ಹೈಕೋರ್ಟ್ ನಲ್ಲಿ ತಿರಸ್ಕೃತ ಗೊಂಡಿತ್ತು. ಇದೀಗ ಹೈಕೋರ್ಟ್ ನಲ್ಲಿ ಜಾಮೀನು ಮಂಜೂರಾಗಿದೆ.

Leave A Reply

Your email address will not be published.