ಯುಪಿ ಯಲ್ಲಿ ಮರಳಿ ಬಿಜೆಪಿ ಅಧಿಕಾರಕ್ಕೆ ಬಂದರೆ ಲವ್ ಜಿಹಾದ್ ಗೆ 10 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ !!

ಪಂಚರಾಜ್ಯಗಳ ಚುನಾವಣಾ ಕಣ ರಂಗೇರಿದೆ. ಎಲ್ಲಾ ಪಕ್ಷಗಳು ತನ್ನ ಚುನಾವಣಾ ಪ್ರಣಾಳಿಕೆಗಳನ್ನು ಬಿಡುಗಡೆ ಮಾಡುತ್ತಿವೆ. ಹೀಗಿರುವಾಗ ಉತ್ತರ ಪ್ರದೇಶದಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ ಬಂದರೆ ಲವ್ ಜಿಹಾದ್ ನಡೆಸುವವರಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡವನ್ನು ವಿಧಿಸುವುದಾಗಿ ಘೋಷಿಸಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ನಿನ್ನೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಲೋಕ ಕಲ್ಯಾಣ ಸಂಕಲ್ಪ ಪತ್ರ-2022 ಹೆಸರಿನ ಈ ಪ್ರಣಾಳಿಕೆಯಲ್ಲಿ ಕಳೆದ 2017ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಕಟಿಸಿದ್ದ 212 ಸಂಕಲ್ಪಗಳಲ್ಲಿ ಶೇ.92 ರಷ್ಟು ಈಡೇರಿಸುವುದಾಗಿ ಹೇಳಲಾಗಿದೆ.

ಅಧಿಕಾರಕ್ಕೆ ಮರಳಿದರೆ ಮುಂದಿನ ಐದು ವರ್ಷ ರೈತರ ನೀರಾವರಿ ಪಂಪ್‍ಸೆಟ್‍ಗಳಿಗೆ ಉಚಿತ ವಿದ್ಯತ್, 14 ದಿನದೊಳಗೆ ರೈತರಿಗೆ ಕಬ್ಬಿನ ಬಾಕಿ ಪಾವತಿಸಬೇಕು. ವಿದ್ಯಾರ್ಥಿನಿಯರಿಗೆ ಉಚಿತ ಸ್ಕೂಟರ್, 2 ಕೋಟಿ ಟ್ಯಾಬ್ಲೆಟ್ ಹಾಘೂ ಸ್ಮಾರ್ಟ್‍ಫೋನ್ ನೀಡಲಾಗುವುದು ಎಂದು ಭರವಸೆ ನೀಡಲಾಗಿದೆ.

Leave A Reply

Your email address will not be published.