ದೇವಸ್ಥಾನಕ್ಕೆ ಹೆಣ್ಣು ಮಕ್ಕಳು ಚಡ್ಡಿಹಾಕಿಕೊಂಡು ಹೋಗುತ್ತಾರೆ, ಅವರನ್ನು ತಡೆಯಿರಿ ಎಂದ ನಗರಸಭೆ ಸದಸ್ಯ!!!

ರಾಜ್ಯದಲ್ಲಿ ಹಿಜಾಬ್ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈ ಪ್ರಕರಣಗಳು ಈಗ ಹೈಕೋರ್ಟ್ ಮೆಟ್ಟಿಲೇರಿರುವುದರಿಂದ ತೀರ್ಮಾನ ಇನ್ನಷ್ಟೇ ಬರಬೇಕಿದೆ. ಇಡೀ ರಾಜ್ಯವು ಕೋರ್ಟ್ ತೀರ್ಮಾನಕ್ಕೆ ಕಾಯುತ್ತಿದೆ. ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗಿದೆ. ಈ ಪ್ರತಿಭಟನೆ ತೀವ್ರಗೊಂಡ ಕಾರಣ ಸರಕಾರ ಶಾಲಾ ಕಾಲೇಜುಗಳಿಗೆ ರಜೆ ಕೂಡಾ ಘೋಷಿಸಿದೆ.

ಕಲಬುರಗಿಯಲ್ಲಿ ಮಂಗಳವಾರ ಹಿಜಾಬ್ ಪರವಾಗಿ ಪ್ರತಿಭಟನೆ ನಡೆದಿದ್ದು ಈ ಪ್ರತಿಭಟನೆಯಲ್ಲಿ ನಗರಸಭೆ ಸದಸ್ಯ ಡಾ.ಅಹ್ಮದ್ ಪಟೇಲ್ ಅವರು ದೇವಸ್ಥಾನಕ್ಕೆ ಹೆಣ್ಣು ಮಕ್ಕಳು ಚಡ್ಡಿ ಹಾಕಿಕೊಂಡು ಹೋಗ್ತಾರೆ. ಅವರನ್ನು ಮೊದಲು ತಡೆಯಿರಿ. ನಮಗೇಕೆ ವಿರೋಧಿಸುತ್ತೀರಿ ಎಂಬ ಹೇಳಿಕೆಯನ್ನು ನೀಡಿದ್ದಾರೆ. ಈ ಹೇಳಿಕೆಯ ಪ್ರಕಾರ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Leave A Reply

Your email address will not be published.