ಉಪ್ಪಿನಂಗಡಿ:ಚಲಿಸುತ್ತಿದ್ದ ಗೂಡ್ಸ್ ವಾಹನ ಬೆಂಕಿಗಾಹುತಿ!! ಉಪ್ಪಿನಂಗಡಿ ಸಮೀಪದ ಬೆದ್ರೋಡಿ ಎಂಬಲ್ಲಿ ಘಟನೆ

ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಬೆದ್ರೋಡಿ ಎಂಬಲ್ಲಿ ಇಂದು ಸಂಜೆ ವೇಳೆ ಗೂಡ್ಸ್ ವಾಹನವೊಂದಕ್ಕೆ ಬೆಂಕಿ ಹಿಡಿದ ಘಟನೆ ನಡೆದಿದೆ.

ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಗೂಡ್ಸ್ ವಾಹನಕ್ಕೆ ಬೆದ್ರೋಡಿ ತಲುಪುತ್ತಿದ್ದಂತೆ ಬೆಂಕಿ ಹಿಡಿದ ಪರಿಣಾಮ ವಾಹನವು ಹೊತ್ತಿ ಉರಿದಿದ್ದು, ವಿಷಯ ತಿಳಿದ ಕೂಡಲೇ ಉಪ್ಪಿನಂಗಡಿ ಠಾಣಾಧಿಕಾರಿ ಓಮನ ನೇತೃತ್ವದ ಪೊಲೀಸರ ತಂಡ ಹಾಗೂ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.ರಾಷ್ಟೀಯ ಹೆದ್ದಾರಿಯಲ್ಲಿ ವಾಹನಗಳ ಸಾಲು ಹೆಚ್ಚಾಗಿದ್ದು, ಬದಲಿ ಮಾರ್ಗದ ಮೂಲಕ ಸಂಚರಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಿಸಲಾಗಿದೆ.

Leave A Reply

Your email address will not be published.