ಪುಸ್ತಕ ಬಹುಮಾನಕ್ಕಾಗಿ ಲೇಖಕರಿಂದ ಹಾಗೂ ಪ್ರಕಾಶಕರಿಂದ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಫೆ.23 ಕೊನೆ ದಿನ

ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ, ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ, ಇತ್ಯಾದಿ ಕಲಾಪ್ರಕಾರಗಳಲ್ಲಿ 2021ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ ಜನವರಿ 2021 ರಿಂದ ಡಿಸೆಂಬರ್ 2021 ರೊಳಗಾಗಿ ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ ಹಾಗೂ ಪ್ರಕಾಶಕರಿಂದ ಅರ್ಜಿ ಆಹ್ವಾನಿಸಿದೆ.

ಆಯ್ಕೆಯಾದ ಪುಸ್ತಕಕ್ಕೆ ರೂ.25,000/-ಗಳ ಬಹುಮಾನವನ್ನು ನೀಡಲಾಗುವುದು. ಯಕ್ಷಗಾನದ ವಿವಿಧ ಆಯಾಮಗಳ ಬಗ್ಗೆ ಸಂಗೀತ, ಆಹಾರ್ಯ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪುಸ್ತಕಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ.

ಪುಸ್ತಕ ಬಹುಮಾನಕ್ಕೆ ಸಲ್ಲಿಸುವ ಪುಸ್ತಕವನ್ನು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು.ಸಂಪಾದಿತ, ಅಭಿನಂದನ ಕೃತಿಯಾಗಿರಬಾರದು, ಸ್ವರಚಿತವಾಗಿರಬೇಕು. ಅದಲ್ಲದೆ ಪ್ರಥಮ ಮುದ್ರಣ ಆವೃತ್ತಿಯಾಗಿರಬೇಕು.

ಬಹುಮಾನಕ್ಕೆ ಪುಸ್ತಕಗಳನ್ನು ಕಳುಹಿಸುವವರು ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ. ರಸ್ತೆ, ಬೆಂಗಳೂರು-560 002, ಇವರಿಗೆ ಫೆಬ್ರವರಿ 23 ರ ಒಳಗಾಗಿ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಕಡ್ಡಾಯವಾಗಿ ಕಳುಹಿಸಬೇಕು.

ಯಾವುದೇ ಕಾರಣಕ್ಕೂ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ. ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 080-22113146 ಗೆ ಸಂಪರ್ಕಿಸಬಹುದು ಹಾಗೂ ಅರ್ಜಿಯನ್ನು ಕಚೇರಿಯ ವೇಳೆಯಲ್ಲಿ ಅಕಾಡೆಮಿಯಿಂದ ಪಡೆಯಬಹುದು ಎಂದು ಯಕ್ಷಗಾನ ಅಕಾಡೆಮಿಯ ರಿಜಿಸ್ಟ್ರಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.