ಸೌರವ್ ಗಂಗೂಲಿ ಆಸ್ಪತ್ರೆಗೆ ದಾಖಲು!

ಮಾಜಿ ಕ್ರಿಕೆಟಿಗ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನಾರಾಯಣ ಹೆಲ್ತ್ ಸಿಟಿಗೆ ದಾಖಲಾಗಿದ್ದಾರೆ‌. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರ ಬಳಿ ಇರುವ ನಾರಾಯಣ ಹೆಲ್ತ್ ಸಿಟಿಯಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ದಾಖಲಾಗಿದ್ದು, ಆರೋಗ್ಯ ತಪಾಸಣೆಗೊಳಗಾಗಿದ್ದಾರೆ.

ಆರೋಗ್ಯ ತಪಾಸಣೆಗೆಂದು ನಾರಾಯಣ ಹೆಲ್ತ್ ಸಿಟಿಗೆ ಬಂದ ಸೌರವ್ ಗಂಗೂಲಿ ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿ ವಿವಿಧ ಚೆಕ್ ಅಪ್ ಮಾಡಿಸಿಕೊಂಡಿದ್ದಾರೆ. ಕಾರ್ಡಿಯಾಕ್ ಸ್ಪೆಷಲಿಸ್ಟ್ ಡಾ.ದೇವಿ ಶೆಟ್ಟಿ ನೇತೃತ್ವದಲ್ಲಿ ಆರೋಗ್ಯ ತಪಾಸಣೆಗೊಳಗಾಗಿದ್ದಾರೆ.

ಸೌರವ್ ಗಂಗೂಲಿ ಇತ್ತೀಚೆಗಷ್ಟೇ ಲಘು ಹೃದಯಾಘಾತಕ್ಕೆ ಒಳಗಾಗಿದ್ದು,‌ನಂತರ ಚಿಕಿತ್ಸೆ ಪಡೆದುಕೊಂಡಿದ್ದರು.

ಅಂದಿನಿಂದ ಸೌರವ್ ಗಂಗೂಲಿ ಹೃದಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿ ನಿಯಮಿತವಾಗಿ ಆರೋಗ್ಯ ತಪಾಸಣೆಗೊಳಗಾಗುತ್ತಿದ್ದಾರೆ. ವೈದ್ಯರು ಅಗತ್ಯ ಸಲಹೆಗಳನ್ನು ನೀಡಿದ್ದು. ಆರೋಗ್ಯ ತಪಾಸಣೆ ಮುಗಿದ ಬಳಿಕ ಆಸ್ಪತ್ರೆಯಿಂದ ಸೌರವ್ ಗಂಗೂಲಿ ನಿರ್ಗಮಿಸಿದ್ದಾರೆ‌

Leave A Reply

Your email address will not be published.