ಪುತ್ತೂರು:ಸೈಕಲ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ|ಗಂಭೀರ ಗಾಯಗೊಂಡಿದ್ದ ಸೈಕಲ್ ಸವಾರ ಚಿಕಿತ್ಸೆ ಫಲಿಸದೆ ಮೃತ್ಯು

ಪುತ್ತೂರು: ಕೆಮ್ಮಿಂಜೆ ಶ್ರೀ ಮಹಾವಿಷ್ಣು ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ಸೈಕಲ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ,ಸೈಕಲ್ ಸವಾರ ಮೃತಪಟ್ಟ ಘಟನೆ ಇಂದು ನಡೆದಿದೆ.

ಮೃತರನ್ನು ಕೆಮ್ಮಿಂಜೆ ನಿವಾಸಿ ಚಿದಾನಂದ ಎಂಬುವವರೆಂದು ಗುರುತಿಸಲಾಗಿದೆ.

ಚಿದಾನಂದ ಅವರು ದೇವಸ್ಥಾನದ ಕಡೆ ಸೈಕಲ್’ನಲ್ಲಿ ಹೋಗುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ್ದು,ಡಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡಿದ್ದಾರೆ.ತಕ್ಷಣ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Leave A Reply

Your email address will not be published.