ಮಂಗಳೂರು : ಸೆಂಟ್ರಲ್ ಮಾರ್ಕೆಟ್ ಬಳಿ ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ| ಪ್ರತ್ಯೇಕ ಘಟನೆಯಲ್ಲಿ ಇಬ್ಬರ ಬಂಧನ ಮಾಡಿದ ಪೊಲೀಸರು

ಮಂಗಳೂರು : ಸೆಂಟ್ರಲ್ ಮಾರ್ಕೆಟ್ ಬಳಿ ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ‌ ಆರೋಪದಲ್ಲಿ ಫೆ‌.13 ರಂದು ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ರೆಂಜಾಡಿಯ ಬಾತೀಶ್ ( 20) ಎಂಬಾತನನ್ನು ಬಂದರು ಠಾಣೆಯ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೋಡಿಕಲ್ ಸರಕಾರಿ ಶಾಲೆಯ ಬಳಿ ಸಾರ್ವಜನಿಕ ರಸ್ತೆಯಲ್ಲಿ ಗಾಂಜಾ ಸೇವನೆ ಮಾಡಿ, ಇತರರಿಗೆ ತೊಂದರೆ ಕೊಡುತ್ತಿದ್ದ ಆರೋಪದಲ್ಲಿ ವರ್ಶಿತ್ ( 21) ಎಂಬಾತನನ್ನು ಸೆನ್ ಪೊಲೀಸರು ಸೋಮವಾರ ಬಂಧಿಸಿ‌ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave A Reply

Your email address will not be published.