ಹಿಜಾಬ್ ವಿವಾದ: ಹಿಜಾಬ್ ಕೇಸನ್ನು ಮುಂದೂಡಿದ ತ್ರಿಸದಸ್ಯ ಪೀಠ

ಹಿಜಾಬ್ ವಿವಾದ ಸಂಬಂಧ ಇಂದು‌ ಅರ್ಜಿ ವಿಚಾರಣೆ ಮುಂದುವರೆಸಿದ್ದ ಕರ್ನಾಟಕ ಹೈಕೋರ್ಟ್ ತ್ರಿಸದಸ್ಯ ಪೀಠ ವಿಚಾರಣೆಯನ್ನು ಇಂದು ಮಧ್ಯಾಹ್ನ 2.30 ಕ್ಕೆ ಕೈಗೆತ್ತಿಗೊಂಡಿತು.

ಉಡುಪಿಯಲ್ಲಿ ಪ್ರಾರಂಭವಾದ ಈ ಹಿಜಾಬ್ ವಿವಾದ ಈಗ ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇನ್ನು ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ತಿ, ಕೃಷ್ಣ ಎಸ್ ದೀಕ್ಷಿತ್, ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಪ್ರಕರಣದ ವಿಚಾರಣೆಯನ್ನು ಇಂದು ಕೂಡಾ ನಡೆಸುತ್ತಿದ್ದಾರೆ. ಅರ್ಜಿಯ ವಿಚಾರಣೆ ಆಗುವವರೆಗೂ ಯಾರೂ ಶಲ್ಯ ,ಹಿಜಾಬ್ ಧರಿಸಬಾರದು ಎಂದು ನ್ಯಾಯಪೀಠ ಹೇಳಿದೆ.

ವಾದ ಪ್ರತಿವಾದವನ್ನು ಆಲಿಸಿದ ಹೈಕೋರ್ಟ್ ಇಂದು ಕೂಡಾ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2.30 ಕ್ಕೆ ಮುಂದೂಡಿದೆ.

Leave A Reply

Your email address will not be published.