ನೆಲ್ಯಾಡಿ : ಜೀಪಿನಲ್ಲಿ ನೇಮಕ್ಕೆ ಹೋದ ಕುಟುಂಬ| ಗಾಡಿ ಪಲ್ಟಿಯಾಗಿ ಮೂವರು ಮಕ್ಕಳು ಸಹಿತ ವೃದ್ಧೆ ಸೇರಿ ಏಳು ಮಂದಿಗೆ ಗಂಭೀರ ಗಾಯ

ನೆಲ್ಯಾಡಿ : ಕೊಕ್ಕಡ ಸಮೀಪ ನೇಮಕ್ಕೆಂದು ಕಡಬದ ಕೊಣಾಜೆಯಿಂದ ಕುಟುಂಬವೊಂದು ಜೀಪಿನಲ್ಲಿ ತೆರಳುತ್ತಿದ್ದಾಗ ಚಾಲಕನ ಹತೋಟಿ ತಪ್ಪಿ ಜೀಪು ಪಲ್ಟಿಯಾಗಿದೆ. ಹಲವು ಮಂದಿ ಗಂಭೀರ ಗಾಯಗೊಂಡ ಘಟನೆಯೊಂದು ನಡೆದಿದೆ.

ಈ ಘಟನೆ ಕೊಕ್ಕಡ ಮತ್ತು ಅರಸಿನಮಕ್ಕಿ ಸಮೀಪದ ಪುತ್ತಿಗೆಯಲ್ಲಿ ರಾತ್ರಿ ನಡೆದಿದೆ. ಜೀಪಿನಲ್ಲಿದ್ದವರ ಪೈಕಿ ಮೂವರು ಮಕ್ಕಳು ವೃದ್ಧೆ ಸೇರಿದಂತೆ ಏಳು ಮಂದಿಗೆ ಗಾಯವಾಗಿದೆ.

ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ, ಜೊತೆಗೆ ತೀವ್ರ ಗಾಯಗೊಂಡ ವೃದ್ಧೆ ಮತ್ತು ಮಕ್ಕಳನ್ನು ಮಂಗಳೂರು ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave A Reply

Your email address will not be published.