ಮೂಲ್ಕಿ : ಪಾವಂಜೆ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ !!! ಸ್ಥಳೀಯರ ಸಹಾಯದಿಂದ ಮೃತದೇಹ ಪತ್ತೆ

ಮೂಲ್ಕಿ : ಪಾವಂಜೆ ಸೇತುವೆ ಮೇಲೆ‌ ಬೈಕ್ ನಿಲ್ಲಿಸಿ‌ ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ( ಫೆ.16) ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 66 ರ ಹಳೆಯಂಗಡಿ ಸಮೀಪದ ಪಾವಂಜೆ ಸೇತುವೆ ಮೇಲೆ ಬೈಕ್ ನಿಲ್ಲಿಸಿ ವ್ಯಕ್ತಿ ಹಾರಿದ್ದಾರೆ. ಮೃತರನ್ನು ಸುಚೇಂದ್ರ ಕುಮಾರ್ ( 39) ಎಂದು ಗುರುತಿಸಲಾಗಿದೆ.

ಇವರು ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದು, ಶಿವಮೊಗ್ಗದಲ್ಲಿ ಕೆಲಸ ಮಾಡಿಕೊಂಡಿದ್ದರು. ಇವರ ಪತ್ನಿಯ ಮನೆ ಚೇಳಾಯರುನಲ್ಲಿದೆ.

ಇಂದು ಬೆಳಿಗ್ಗೆ ( ಬುಧವಾರ) ಮನೆಯಿಂದ ಹೊರಟವರು ನಾಪತ್ತೆಯಾಗಿದ್ದರು. ಸುಮಾರು 11 ಗಂಟೆಯ ಹೊತ್ತಿಗೆ ಸೇತುವೆಯಿಂದ ಹಾರಿದ ಮಾಹಿತಿ ದೊರಕಿ ಸ್ಥಳಕ್ಕೆ ಧಾವಿಸಿದ ಮೂಲ್ಕಿ ಪೊಲೀಸರು ಸ್ಥಳೀಯರ ಸಹಾಯದಿಂದ ಮೃತದೇಹ ಮೇಲಕ್ಕೆತ್ತಿದ್ದಾರೆ.

Leave A Reply

Your email address will not be published.