ಬಿ.ಸಿಎಂ ಹಾಸ್ಟೆಲ್‌ ವಿದ್ಯಾರ್ಥಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ|ಯಾರೋ ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಪೋಷಕರ ಅನುಮಾನ

ಮೈಸೂರು:ಸರಸ್ವತಿಪುರಂ ಬಿ.ಸಿಎಂ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯೋರ್ವನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆಯಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಬಿಳಿಕೆರೆ ನಿವಾಸಿ ಅಕ್ಷಯ್ (18) ಎನ್ನಲಾಗಿದ್ದು,ಈತ ಲಕ್ಷ್ಮೀಪುರಂ ಸರ್ಕಾರಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದನು.

ಅಕ್ಷಯ್’ನನ್ನು ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು
ಅಕ್ಷಯ್ ಪೋಷಕರು ಆರೋಪಿಸಿದ್ದು, ಈ ಬಗ್ಗೆ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.